- Advertisement -
- Advertisement -
ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಇಂದು ನಡೆಯಬೇಕಿದ್ದ ಎಫ್ಡಿಎ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಕೆಪಿಎಸ್ಸಿ ಕಾರ್ಯದರ್ಶಿ ಸತ್ಯವತಿ ಜಿ. ಆದೇಶ ಹೊರಡಿಸಿದ್ದಾರೆ.
ಪರೀಕ್ಷೆ ಪತ್ರಿಕೆ ಸೋರಿಕೆ ಬಗ್ಗೆ ಮಾಹಿತಿ ಪಡೆದಿದ್ದ ಸಿಸಿಬಿ ಪೊಲೀಸರು, ಕೆಪಿಎಸ್ಗೆ ಮಾಹಿತಿ ನೀಡಿದೆ. ಮಾಹಿತಿ ತಿಳಿಯುತ್ತಿದ್ದಂತೆ ಕೆಪಿಎಸ್ಸಿ ಪರೀಕ್ಷೆ ಮುಂದೂಡಿದೆ.
ಈ ಬಗ್ಗೆ ತನಿಖೆಗೆ ಇಳಿದಿದ್ದ ಪೊಲೀಸರು ಪ್ರಕರಣ ಸಂಬಂಧ ರಾಚಪ್ಪ, ಚಂದ್ರು ಸೇರಿ ಆರು ಜನರನ್ನು ಬಂಧಿಸಿದ್ದಾರೆ. ಅಲ್ಲದೇ ಆರೋಪಿಗಳಿಂದ 24 ಲಕ್ಷ ಹಣ, 3 ವೆಹಿಕಲ್ ವಶಕ್ಕೆ ಪಡೆದುಕೊಂಡಿದ್ದಾರೆ. ಇಂದು ನಡೆಯಬೇಕಿದ್ದ 1,114 ಹುದ್ದೆಗಳ ಪರೀಕ್ಷೆಗೆ 3.74 ಲಕ್ಷ ಅಭ್ಯರ್ಥಿಗಳು ನೊಂದಾಯಿಸಿಕೊಂಡಿದ್ದರು.
- Advertisement -