Sunday, May 5, 2024
spot_imgspot_img
spot_imgspot_img

ಸಾಲದ ಕಾಟಕ್ಕೆ ಬೇಸತ್ತು, ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ..!!

- Advertisement -G L Acharya panikkar
- Advertisement -

ಸಾಲದ ಕಾಟಕ್ಕೆ ಬೇಸತ್ತು, ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬಳ್ಳಾರಿಯ ಬಂಡಿಹಟ್ಟಿಯಲ್ಲಿ ನಡೆದಿದೆ.

ನಗರದ ಆಂಜನೇಯ ದೇವಸ್ಥಾನ ಬಳಿ ನಿವಾಸಿಗಳಾದ ಈರಣ್ಣ (28) ತನ್ನ ಪತ್ನಿ ದುರ್ಗಮ್ಮಳನ್ನ (25) ನೇಣು ಹಾಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೋಷಕರ ಆತ್ಮಹತ್ಯೆಯಿಂದು ಇದೀಗ ರಾಕೇಶ್ ಎಂಬ 16 ತಿಂಗಳ ಮಗು ಅನಾಥವಾಗಿದೆ.

ಮೃತ ಈರಣ್ಣನಿಗೆ ಕುಡಿಯುವ ಚಟ ಇತ್ತು. ಅದಕ್ಕಾಗಿ ಪತ್ನಿ ಬಳಿ ಪದೇ ಪದೇ ಹಣ ಕೇಳುತ್ತಿದ್ದ. ಪತ್ನಿ ಅಲ್ಲಲ್ಲಿ ಸಾಲ ಮಾಡಿ ಪತಿಗೆ ಹಣ ನೀಡಿದ್ದಳು. ಆದರೆ ಹೆಂಡತಿ ಬಳಿ ಹಣ ಪಡೆದ ಪತಿ, ಈರಣ್ಣಾ ಕುಡಿದು ಹಾಳು ಮಾಡಿದ್ದಾನೆ. ಕೊನೆಗೆ ಸಾಲಗಾರರು ಮನೆಗೆ ಬಂದಿದ್ದು, ಗಂಡನ ಜೊತೆ ಪತ್ನಿ ದುರ್ಗಮ್ಮ, ಜಗಳ ಮಾಡಿದ್ದಾಳೆ.‌ ಇದರಿಂದ ಭಯಪಟ್ಟು ಸಾಲಗಾರರ ಕಾಟ ತಪ್ಪಿಸಿಕೊಳ್ಳಲು ಪತ್ನಿಯನ್ನು ನೇಣು ಹಾಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಬಗ್ಗೆ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!