Saturday, June 28, 2025
spot_imgspot_img
spot_imgspot_img

ಕಾಲುಜಾರಿ ಬಿದ್ದು ನೀರುಪಾಲಾದ ಬಾಲಕಿ

- Advertisement -
- Advertisement -

ಕಾಲುಜಾರಿ ಬಿದ್ದು ಬಾಲಕಿಯೊಬ್ಬಳು ನೀರುಪಾಲಾಗಿರುವ ಘಟನೆ ಹಾರಂಗಿ ಬಲದಂಡೆ ನಾಲೆಯಲ್ಲಿ ನಡೆದಿದೆ.
ಅರಕಲಗೂಡು ತಾಲೂಕಿನ ರಾಮನಾಥಪುರ ಹೋಬಳಿ ಮಧುರನಹಳ್ಳಿ ಗ್ರಾಮದ ವಾಸಿ ರೇವಣ್ಣ ಹಾಗೂ ಭಾಗ್ಯ ದಂಪತಿಯ ಮಗಳು ಸುಪ್ರೀತಾ (5) ಮೃತ ಬಾಲಕಿ ಎಂದು ಗುರುತಿಸಲಾಗಿದೆ.

ಮಕ್ಕಳೊಂದಿಗೆ ಹಾರಂಗಿ ಬಲದಂಡೆ ನಾಲೆಗೆ ಆಟವಾಡಲು ಹೋಗಿದ್ದಾಗ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಬಾಲಕಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ತಾಲೂಕು ಕಚೇರಿಯ ಶಿರೆಸ್ತೇದಾರರಾದ ಸಿ.ಸ್ವಾಮಿ ಉಪತಹಶೀಲ್ದಾರರಾದ ರವಿ ಗ್ರಾಮ ಆಡಳಿತ ಅಧಿಕಾರಿ ಪ್ರದೀಪ್ ಕಾಂಬ್ಳೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

- Advertisement -

Related news

error: Content is protected !!