Monday, June 30, 2025
spot_imgspot_img
spot_imgspot_img

ಪುತ್ತೂರು: ಪುತ್ತಿಲ ಪರಿವಾರ ಕಚೇರಿಗೆ ನುಗ್ಗಿದ ಯುವಕರ ತಂಡ – ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

- Advertisement -
- Advertisement -

ಪುತ್ತೂರು: ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲರವರು ಮುಕ್ರಂಪಾಡಿಯಲ್ಲಿ ಹೊಂದಿರುವ ಪುತ್ತಿಲ ಪರಿವಾರದ ಕಚೇರಿಯ ಮುಂಭಾಗದಲ್ಲಿ ಕೆಲ ಯುವಕರು ಸಾರ್ವಜನಿಕವಾಗಿ ತಲವಾರು ಪ್ರದರ್ಶಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟಣೆ ನಡೆದ ತಕ್ಷಣವೇ ಆರೋಪಿಗಳಾದ ಪುತ್ತೂರು ಶಾಂತಿಗೋಡು ಗ್ರಾಮದ ದಿನೇಶ ಪಂಜಿಗ (38) ನರಿಮೊಗರು ಗ್ರಾಮದ ಭವಿತ್ (19) ಪುತ್ತೂರು ಬೊಳ್ವಾರು ನಿವಾಸಿ ಮನ್ವಿತ್ (19) ಆರ್ಯಾಪು ಗ್ರಾಮದ ಜಯಪ್ರಕಾಶ (18) ಚಿಕ್ಕಮುಡ್ನೂರು ಗ್ರಾಮದ ಚರಣ್ (23) ಪುತ್ತೂರು ಬನ್ನೂರು ಗ್ರಾಮದ ಮನೀಶ (23) ಪುತ್ತೂರು ಕಸಬಾ ಗ್ರಾಮದ ವಿನೀತ್ (19)

ಹಾಗೂ ಇಬ್ಬರು ಅಪ್ರಾಪ್ತ ಪ್ರಾಯದ ಬಾಲಕರನ್ನು ಪೊಲೀಸರು ವಶಕ್ಕೆ ಪಡೆದು, ಅವರುಗಳ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಕ್ರ: 108/2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಸಾರ್ವಜನಿಕರು ಈ ಬಗ್ಗೆ ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಡದಂತೆ ಹಾಗೂ ಸುಳ್ಳು ವದಂತಿಗಳನ್ನು ಪ್ರಸಾರ ಮಾಡದಂತೆ ದ.ಕ.ಜಿಲ್ಲಾ ಎಸ್‌.ಪಿ.ಯವರು ಮನವಿ ಮಾಡಿದ್ದಾರೆ.

- Advertisement -

Related news

error: Content is protected !!