Sunday, May 19, 2024
spot_imgspot_img
spot_imgspot_img

ಕುಂದಾಪುರ: ಡ್ರೀಮ್ ಫೈನಾನ್ಸ್ ನ ಪಾಲುದಾರ ಅಜೇಂದ್ರ ಶೆಟ್ಟಿಯ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ

- Advertisement -G L Acharya panikkar
- Advertisement -

ಕುಂದಾಪುರ: ಫೈನಾನ್ಸ್‌ ವ್ಯವಹಾರ ಮಾಡಿಕೊಂಡಿದ್ದ ಉದ್ಯಮಿಯೋರ್ವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸಳ್ವಾಡಿಯಲ್ಲಿ ನಡೆದಿದೆ. ಕುಂದಾಪುರದ ಡ್ರೀಮ್‌ ಫೈನಾನ್ಸ್‌ ಪಾಲುದಾರ, ಯಡ್ಯಾಡಿ ಮತ್ಯಾಡಿ ಕೊಡಲ್‌ ನಿವಾಸಿಯಾಗಿರುವ ಅಜೇಂದ್ರ ಶೆಟ್ಟಿ (33) ಎಂಬವರೇ ಕೊಲೆಯಾದವರು.

ಕಳೆದ ಏಳು ವರ್ಷಗಳಿಂದಲೂ ಸಳ್ವಾಡಿಯಲ್ಲಿ ಡ್ರೀಮ್ ಫೈನಾನ್ಸ್‌ ಹೆಸರಿನಲ್ಲಿ ಪಾಲುದಾರಿಕೆಯಲ್ಲಿ ಫೈನಾನ್ಸ್ ನಡೆಸುತ್ತಿದ್ದ ಅಜೇಂದ್ರ ಶೆಟ್ಟಿ ನಿನ್ನೆ ತಡರಾತ್ರಿಯ ವರೆಗೂ ಮನೆಗೆ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದಾಗ ಕೊಲೆಯಾಗಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಕುಂದಾಪುರ ಗ್ರಾಮಾಂತರ (ಕಂಡ್ಲೂರು) ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ. ಹಣಕಾಸಿನ ವಿಚಾರಕ್ಕೆ ಕೊಲೆ ನಡೆದಿದೆಯಾ ಇಲ್ಲಾ ಬೇರೆ ವಿಚಾರಕ್ಕೆ ಈ ಹತ್ಯೆ ನಡೆದಿದೆಯಾ ಅನ್ನೋ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!