ಅಡುಗೆ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ನಿಂದ ಅನಿಲ ಸೋರಿಕೆಯಾಗಿ ಮನೆಗೆ ಬೆಂಕಿ ಹತ್ತಿಕೊಂಡು ಆ ಬೆಂಕಿಯಲ್ಲಿ ಮಹಿಳೆಯೊಬ್ಬರು ದಹಿಸಿಹೋದ ಭೀಕರ ಘಟನೆ ಧಾರವಾಡ ತಾಲೂಕಿನ ಕಲ್ಲೆ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ಮಹಾದೇವಿ ಒಗೆನ್ನವರ (28) ಎಂದದು ಗುರುತಿಸಲಾಗಿದೆ.
ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಈ ಮನೆಯ ಅಡುಗೆ ಮನೆಯಲ್ಲಿ ಇದ್ದ ಸಿಲಿಂಡರ್ನಿಂದ ಅನಿಲ ಸೋರಿಕೆಯಾಗಿ ಗ್ಯಾಸ್ ಸ್ಟವ್ನಿಂದ ಬೆಂಕಿ ಹತ್ತಿಕೊಂಡಿತು. ಆಗ ಅಡುಗೆ ಮನೆಯಲ್ಲಿದ್ದ ಮಹಾದೇವಿ ಒಗೆನ್ನವರ ಅವರಿಗೆ ಬೆಂಕಿ ಹತ್ತಿಕೊಂಡಿತು. ಬೆಳಗ್ಗೆ ಬೆಳಗ್ಗೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಆಕೆಗೆ ಹೊರಗೆ ಬರಲು ಸಾಧ್ಯವಾಗಲೇ ಇಲ್ಲ. ಹೀಗಾಗಿ ಅವರಿಗೆ ತುಂಬಾ ಸುಟ್ಟ ಗಾಯಗಳಾದವು.
ಈ ನಡುವೆ, ಆಕೆಯನ್ನು ರಕ್ಷಿಸಲು ಇನ್ನೂ ಕೆಲವು ಮಹಿಳೆಯರು ಮುಂದಾಗಿದ್ದು, ಅವರಿಗೂ ಸುಟ್ಟ ಗಾಯಗಳಾಗಿವೆ. ಮಹಾದೇವಿ ಸೇರಿದಂತೆ ಉಳಿದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಾದೇವಿ ಅವರು ಮೃತಪಟ್ಟರೆ ಉಳಿದವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ಆರಿಸುವಲ್ಲಿ ನೆರವಾದರು.