- Advertisement -
- Advertisement -
ಎನ್. ಜೆ.ಮೆಹತಾ ಸೈಕಲ್ ಗೋದಾಮಿನಲ್ಲಿ ಏಕಾ ಏಕಿ ಬೆಂಕಿ ಆವರಿಸಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಹಾನಿಯಾದ ಘಟನೆ ವಿಜಯಪುರ ನಗರದ ಗಣಪತಿ ಚೌಕ್ ಪ್ರದೇಶದಲ್ಲಿ ನಡೆದಿದೆ.
ಬೆಂಕಿ ಅವಘಡದಿಂದ ನೂರಾರು ಸೈಕಲ್ ಹಾಗೂ ಟೈರ್ ಗಳು ಭಸ್ಮವಾಗಿದೆ. ಅಲ್ಲದೆ ನಗರದ ಇಡೀ ಪ್ರದೇಶದಲ್ಲಿ ದಟ್ಟವಾದ ಹೊಗೆ ಆವರಿಸಿದ್ದು, ಸ್ಥಳೀಯ ನಿವಾಸಿಗಳಿಗೆ, ಉದ್ಯಮಿಗಳಿಗೆ ಆತಂಕ ಶುರುವಾಗಿದೆ. ಈ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
- Advertisement -