Saturday, June 28, 2025
spot_imgspot_img
spot_imgspot_img

ಏರ್ ಇಂಡಿಯಾ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ; ಅಪಾಯದಿಂದ ಪಾರು..!

- Advertisement -
- Advertisement -

ಬೆಂಗಳೂರು: ನಗರದಿಂದ ಕೊಚ್ಚಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ವಿಮಾನವನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಶನಿವಾರ ರಾತ್ರಿ 11:20ಕ್ಕೆ ಬೆಂಗಳೂರಿನಿಂದ 179 ಪ್ರಯಾಣಿಕರನ್ನು ಹೊತ್ತು ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ 1132ರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ವಿಮಾನವನ್ನು ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಲಾಯಿತು. ವಿಮಾನ ಲ್ಯಾಂಡಿಂಗ್ ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಪ್ರಯಾಣಿಕರು ಹಾಗೂ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.

ಇತ್ತೀಚೆಗಷ್ಟೇ ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿತ್ತು.ಮೆ 17ರ ಸಂಜೆ 6 ಗಂಟೆಗೆ ಏರ್ ಇಂಡಿಯಾ ವಿಮಾನ ದೆಹಲಿಯಿಂದ ಹೊರಟಿತ್ತು. ಈ ವೇಳೆ ವಿಮಾನದ ಎಸಿಯಲ್ಲಿ (ಹವಾನಿಯಂತ್ರಣ ಘಟಕ) ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ 6:38 ಕ್ಕೆ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿತ್ತು.

- Advertisement -

Related news

error: Content is protected !!