- Advertisement -
- Advertisement -
ಆಕಸ್ಮಿಕವಾಗಿ ಬೆಂಕಿ ತಗಲಿ ಪಟಾಕಿಗಳು ಸಿಡಿದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ತರಿಕೆರೆಯ ಸುಣ್ಣದ ಹಳ್ಳಿಯಲ್ಲಿ ನಡೆದಿದೆ.
ಮೃತಪಟ್ಟ ಯುವಕ ಪ್ರದೀಪ್ (30) ಎಂದು ಗುರುತಿಸಲಾಗಿದೆ.
ಯುವಕ ಕುರ್ಚಿ ಅಡಿಯಲ್ಲಿ ಪಟಾಕಿ ಚೀಲ ಇಟ್ಟುಕೊಂಡು ಕುಳಿತಿದ್ದ. ಈ ವೇಳೆ ಆಕಸ್ಮಿಕವಾಗಿ ಕಿಡಿ ತಾಕಿದ್ದು ಪಟಾಕಿಗಳು ಸಿಡಿದಿದೆ. ಪಟಾಕಿಗಳು ಸಿಡಿದ ಪರಿಣಾಮ 5 ಅಡಿ ಎತ್ತರಕ್ಕೆ ಹಾರಿ ಬಿದ್ದಿದ್ದಾನೆ. ಈ ವೇಳೆ ದೇಹದ ಸೂಕ್ಷ್ಮ ಭಾಗಗಳಿಗೆ ತೀವ್ರ ಪೆಟ್ಟಾಗತಿದ್ದು, ಇದರಿಂದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮತ್ತೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಅಲ್ಲದೇ ಮೂವರು ಮಕ್ಕಳಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -