Saturday, June 28, 2025
spot_imgspot_img
spot_imgspot_img

ಉಡುಪಿ: ದುರ್ಗಾದೌಡ್ ಆಯೋಜಕರ ವಿರುದ್ದ ಪ್ರಕರಣ ದಾಖಲು.!

- Advertisement -
- Advertisement -

ಉಡುಪಿ: ವಿಜಯದಶಮಿಯಂದು ಉಡುಪಿಯಲ್ಲಿ ಆಯೋಜಿಸಿದ್ದ ದುರ್ಗಾದೌಡ್ ಕಾರ್ಯಕದ್ರಮದ ಆಯೋಜಕರ ವಿರುದ್ದ ದೂರು ದಾಖಲಾದ ಘಟನೆ ನಡೆದಿದೆ. ಕೊರೊನಾ ನಿಯಮ ಉಲ್ಲಂಘಿಸಿದ ಹಿನ್ನಲೆ ಎಪಿಡೆಮಿಕ್ ಆಕ್ಟ್ ಪ್ರಕಾರ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ.

ಡಿ.ಸಿ ಆದೇಶ ಉಲ್ಲಂಘನೆ ಹಿನ್ನೆಲೆ ಉಡುಪಿ ನಗರದ ಪೌರಾಯುಕ್ತರ ದೂರಿನ ಮೇರೆಗೆ ನಗರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಯಾವುದೇ ಪೂರ್ವಾನುಮತಿ ಇಲ್ಲದೆ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದು ಆರೋಪಿಸಲಾಗಿದ್ದು, ಈ ಕಾರ್ಯಕ್ರಮದ ಮೆರವಣಿಗೆಯಲ್ಲಿ ಸಚಿವ ಸುನಿಲ್ ಕುಮಾರ್ ಹಾಗೂ ಶಾಸಕ ರಘುಪತಿ ಭಟ್ ಕೂಡ ಭಾಗವಹಿಸಿದ್ದರು.

- Advertisement -

Related news

error: Content is protected !!