Saturday, June 28, 2025
spot_imgspot_img
spot_imgspot_img

ಮಂಗಳೂರು: ಮೀನಿನ ಕಂಟೇನರ್ ಸ್ಕೂಟಿಗೆ ಡಿಕ್ಕಿ: ಸ್ಕೂಟಿ ಸವಾರೆ ಸ್ಥಳದಲ್ಲೇ ಮೃತ್ಯು

- Advertisement -
- Advertisement -

ಮಂಗಳೂರು: ಮಂಗಳೂರು ನಗರದ ನಂತೂರು ಜಂಕ್ಷನ್ ಬಳಿ ನಡೆದ ವಾಹನ ಅಪಘಾತದಲ್ಲಿ ಯುವತಿಯೊಬ್ಬಳು ದಾರುಣ ಅಂತ್ಯ ಕಂಡಿದ್ದಾಳೆ.

ಮೃತ ಯುವತಿಯನ್ನು ನಗರದ ಕೋಡಿಕಲ್‌ನ ಕ್ರಿಸ್ತಿ ಕ್ರಾಸ್ತಾ(27) ಎಂದು ಗುರುತಿಸಲಾಗಿದೆ.

ನಗರದ ಕಂಕನಾಡಿ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಕ್ರಿಸ್ತಿರವರು ರವಿವಾರ ಮಧ್ಯಾಹ್ನ ಮನೆಯಿಂದ ಆಸ್ಪತ್ರೆಯತ್ತ ದ್ವಿಚಕ್ರ ವಾಹನದಲ್ಲಿ ನಂತೂರು ಜಂಕ್ಷನ್‌ನಲ್ಲಿ ತೆರಳುತ್ತಿದ್ದಾಗ ಹಸಿ ಮೀನು ಸಾಗಿಸುವ ಕಂಟೇನರ್ ವಾಹನವನ್ನು ಕ್ರಿಸ್ತಿ ಚಲಾಯಿಸುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದು ಈ ಸಂದರ್ಭ ಯುವತಿ ಕಂಟೇನರ್ ವಾಹನದ ಹಿಂಬದಿ ಚಕ್ರಕ್ಕೆ ಸಿಲುಕಿಕೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಂಟೇನರ್ ವಾಹನ ಚಾಲಕನ ಅಜಾಗೃತೆಯ ಚಾಲನೆಯೇ ಘಟನೆ ಕಾರಣವೆಂದು ಹೇಳಲಾಗಿದೆ. ಈ ಬಗ್ಗೆ ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಮೊ. ಸಂಖ್ಯೆ 152/24 ಕಲ0 281, 106(1) ಬಿಎನ್ ಎಸ್ ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಯುವತಿ ಕ್ರಿಸ್ತಿ ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ. ಕದ್ರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!