Sunday, May 25, 2025
spot_imgspot_img
spot_imgspot_img

ಕಾಪು: ಮೀನುಗಾರ ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -

ಕಾಪು: ಮೀನುಗಾರಿಕೆ ವೃತ್ತಿ ಮಾಡಿಕೊಂಡಿದ್ದ ವ್ಯಕ್ತಿಯೋರ್ವರು ಅನಾರೋಗ್ಯದಿಂದ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಉಳಿಯಾರಗೋಳಿ ಗ್ರಾಮದ ರಮೇಶ್ (49) ಮೃತ ಮೀನುಗಾರ.

ರಮೇಶ್ ಅವರು ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು 2 ತಿಂಗಳ ಹಿಂದೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ಕಾಪುವಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು ಎಂದು ತಿಳಿದು ಬಂದಿದೆ. ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ್ದ ರಮೇಶ್ ರವರು ಮಧ್ಯರಾತ್ರಿ ನಾಪತ್ತೆಯಾಗಿದ್ದರು. ಪತ್ನಿ ಹುಡುಕಾಡಿದಾಗ ಮನೆಯ ಪಕ್ಕಾಸಿಗೆ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು ಎಂದು ತಿಳಿದು ಬಂದಿದೆ.

ತಕ್ಷಣ ಅವರನ್ನು ಪತ್ನಿ ಮತ್ತು ಮಗ ಕೆಳಗಿಳಿಸಿ ಟಿಎಂಎ ಪೈ ಆಸ್ಪತ್ರೆ ಉಡುಪಿಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ರಮೇಶ್ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!