- Advertisement -
- Advertisement -
ಮಲ್ಪೆ : ಸಮುದ್ರ ಮಧ್ಯೆ ಮೀನುಗಾರಿಕೆ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಬೋಟಿನಿಂದ ನೀರಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಕುಂದಾಪುರ ದೇವಲ್ಕುಂದ ನಿವಾಸಿ ರಾಘವೇಂದ್ರ(45) ಗುರುತಿಸಲಾಗಿದೆ .
ಇವರು ಮೇ.7ರಂದು ರಾತ್ರಿ ಮೀನುಗಾರಿಕೆ ನಡೆಸುವ ಸಲುವಾಗಿ ಇತರರೊಂದಿಗೆ ಹೊರಟಿದ್ದರು. ಈ ವೇಳೆ ಸುಮಾರು 10 ಮಾರು ದೂರ ಅರಬ್ಬಿ ಸಮುದ್ರದಲ್ಲಿ ರಾತ್ರಿ 10:30 ರ ಸುಮಾರಿಗೆ ಮೀನುಗಾರಿಕೆಗೆ ಬಲೆ ಬಿಡುತ್ತಿರುವಾಗ ಸಮುದ್ರದ ಅಬ್ಬರದ ಅಲೆಗೆ ಬೋಟು ಅಲುಗಾಡಿದ ಪರಿಣಾಮ ರಾಘವೇಂದ್ರ ಅವರು ಸಮುದ್ರದ ನೀರಿಗೆ ಬಿದ್ದು ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಇತರ ಮೀನುಗಾರರು ಮೇಲಕ್ಕೆ ಎತ್ತಿ ಉಪಚರಿಸಿ ಮಲ್ಪೆ ಬಂದರಿಗೆ ಬಂದು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಈಗಾಗಲೇ ಮೃತ ಪಟ್ಟಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
- Advertisement -