- Advertisement -
- Advertisement -
ಮಲ್ಪೆ: ಮೀನುಗಾರಿಕೆ ವೇಳೆ ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಅಂಕೋಲಾದ ಸಾರಂಗ ಎಂಬವರ ಮಗ ವಿಶ್ವಾಸ ಕಾಶಿನಾಥ ಸಾರಂಗ(37) ಎಂದು ಗುರುತಿಸಲಾಗಿದೆ. ಇವರು ಮಲ್ಪೆ ಬಂದರಿನಲ್ಲಿ ಕಲಾಸಿಯಾಗಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು, ಜ.12ರಂದು ಮಲ್ಪೆ ಬಂದರಿನಿಂದ ಪಂಡರಾಪುರ ಹೆಸರಿನ ಬೋಟಿನಲ್ಲಿ ಇತರ ಮೀನುಗಾರರೊಂದಿಗೆ ಮೀನುಗಾರಿಕೆಗೆ ತೆರಳಿದ್ದರು.
ಇವರೆಲ್ಲ ಸುಮಾರು 40 ನಾಟಿಕಲ್ ಮೈಲಿ ದೂರದ ಸಮುದ್ರದಲ್ಲಿ ಸಂಜೆ ಮೀನುಗಾರಿಕೆ ನಡೆಸುತ್ತಿದ್ದು, ಈ ವೇಳೆ ಅಬ್ಬರದ ಅಲೆಯಿಂದ ವಿಶ್ವಾಸ್ ಆಯ ತಪ್ಪಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದರೆನ್ನಲಾಗಿದೆ. ಜ.18ರಂದು ಮಧ್ಯಾಹ್ನ ವೇಳೆ ಇವರ ಮೃತದೇಹ ಪತ್ತೆಯಾಯಿತು ಎಂದು ತಿಳಿದುಬಂದಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -