Thursday, July 23, 2026
spot_imgspot_img
spot_imgspot_img

ಅಂಕೋಲ ಮೂಲದ ಮೀನುಗಾರಿಕಾ ಬೋಟ್ ಮುಳುಗಡೆ – ಮೀನುಗಾರರ ರಕ್ಷಣೆ

- Advertisement -
- Advertisement -

ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿ ಏಳು ಜನ ಮೀನುಗಾರರನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ತಾರೇಬಾಗಿಲು ಸಮೀಪದ ಸಮುದ್ರದಲ್ಲಿ ನಡೆದಿದೆ.

ಅಂಕೋಲದ ಬೆಳಂಬಾರ ಕಡಲತೀರದಿಂದ ಮೀನುಗಾರಿಕೆಗೆ ಹೊರಟಿದ್ದ ಮಂಜುನಾಥ್ ಕಾರ್ವಿ ಎಂಬವರ ಮಾಲೀಕತ್ವದ ಶ್ರೀ ನವರತ್ನ ಹೆಸರಿನ ಬೋಟ್ ಹೊನ್ನಾವರದ ತಾರೇಬಾಗಿಲು ಸಮೀಪ ಮೀನುಗಾರಿಕೆ ನಡೆಸುವಾಗ ಬೋಟಿನ ಹೊರಭಾಗಕ್ಕೆ ಹಾನಿಯಾದ್ದರಿಂದ ಬೋಟ್ ಒಳಗೆ ನೀರು ತುಂಬಿ ಮುಳುಗಡೆಯಾಗಿದೆ. ತಕ್ಷಣ ಸ್ಥಳೀಯ ಮೀನುಗಾರಿಕಾ ಬೋಟ್‌ನ ಇಕ್ಬಾಲ್ ಅಬ್ದುಲ್ ಗಫೂರ್ ಎಂಬುವವರು ತಮ್ಮ ಬೋಟ್‌ನಿಂದ ಏಳುಜನ ಮೀನುಗಾರರ ರಕ್ಷಣೆ ಮಾಡಿದ್ದಾರೆ.

ವೆಂಕಟೇಶ್ ಖಾರ್ವಿ, ನಾಗಪ್ಪ ಖಾರ್ವಿ, ಸಂದೀಪ್ ಖಾರ್ವಿ, ವಿಕಾಸ್ ಖಾರ್ವಿ, ವಿಘ್ನೇಶ್ ಖಾರ್ವಿ, ರಜತ್ ಬಾಣಾವಳಿಕರ್ ಹಾಗೂ ಲತೇಶ್ ಖಾರ್ವಿ ಎಂಬ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಬೋಟ್ ಮುಳುಗಡೆಯಿಂದ ಅಂದಾಜು 50 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ.

ಘಟನೆ ಸಂಬಂಧ ಹೊನ್ನಾವರ ಸಿಎಸ್‌ಪಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂಬುದಾಗಿ ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!