Sunday, June 29, 2025
spot_imgspot_img
spot_imgspot_img

ಉಪ್ಪಿನಂಗಡಿ : ಅರಣ್ಯ ಇಲಾಖಾ ಸಿಬ್ಬಂದಿ ಜನಾರ್ಧನ್ ವಿಷ ಸೇವಿಸಿ ಆತ್ಮಹತ್ಯೆ !

- Advertisement -
- Advertisement -

ಉಪ್ಪಿನಂಗಡಿ : ಉಪ್ಪಿನಂಗಡಿಯ ಅರಣ್ಯ ಇಲಾಖಾ ಸಿಬ್ಬಂದಿ ಜನಾರ್ಧನ್ ಎನ್. (36) ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು ಉರ್ಲಾಂಡಿ ನಿವಾಸಿಯಾಗಿರುವ ಜನಾರ್ಧನ್ ಕಳೆದ ಹತ್ತು ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಪ್ರಸ್ತುತ ಉಪ್ಪಿನಂಗಡಿ ವಲಯ ಅರಣ್ಯ ಇಲಾಖಾ ವ್ಯಾಪ್ತಿಯಲ್ಲಿ ಅರಣ್ಯ ವೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮದ್ಯವ್ಯಸನಿಯಾಗಿದ್ದ ಇವರು, ಉಪ್ಪಿನಂಗಡಿ ಕೆಂಪಿ ಮಜಲು ಎಂಬಲ್ಲಿನ ಅರಣ್ಯ ಇಲಾಖಾ ವಸತಿ ಗೃಹದಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಪತ್ನಿ ಸುಮನ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!