Saturday, June 28, 2025
spot_imgspot_img
spot_imgspot_img

ಉಡುಪಿ: ನಾಲ್ವರ ಹತ್ಯೆ ಪ್ರಕರಣ: ಆರೋಪಿ 14 ದಿನ ಪೊಲೀಸ್ ಕಸ್ಟಡಿಗೆ

- Advertisement -
- Advertisement -

ಉಡುಪಿ: ಉಡುಪಿಯಲ್ಲಿ ಗಗನಸಖಿ ಅಯ್ನಾಜ್‌ಳನ್ನು ಕೊಲೆ ಮಾಡಲು ಬಂದಿದ್ದ ಆರೋಪಿ ನಂತರ ಸಾಕ್ಷ್ಯ ನಾಶ ಮಾಡುವುದಕ್ಕಾಗಿ ಚಿಕ್ಕ ಮಕ್ಕಳು ಎನ್ನುವುದನ್ನೂ ನೋಡದೇ ಮನೆಯಲ್ಲಿ ಸಿಕ್ಕ ಸಿಕ್ಕವರನ್ನೆಲ್ಲ ಚಾಕುವಿನಿಂದ ಚುಚ್ಚಿ ಕೊಲೆಗೈದು ಪರಾರಿ ಆಗಿದ್ದ ಆರೋಪಿ ಪ್ರವೀಣ್‌ ಅರುಣ್‌ ಚೌಗಲೆಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ಮಾಡಿದ ನ್ಯಾಯಾಧೀಶರು ಆರೋಪಿಯನ್ನು 14 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಪಡೆಯುವಂತೆ ಆದೇಶ ಹೊರಡಿಸಿದ್ದಾರೆ.

ಈ ಪ್ರಕರಣದ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ ಪಿ ಡಾ ಅರುಣ್ ಕೆ, ಪ್ರವೀಣ್ ಚೌಗುಲೆ ಕೊಲೆಯನ್ನು ಒಪ್ಪಿಕೊಂಡಿದ್ದಾರೆ.ಕೊಲೆಗೆ ಕಾರಣ ವಿಚಾರಣೆಯಲ್ಲಿ ಪಡೆದುಕೊಳ್ಳುತ್ತೇವೆ. ಕೊಲೆಗೆ ಮೂರ್ನಾಲ್ಕು ಕಾರಣಗಳು ಇರುವ ಸಾಧ್ಯತೆ ಇದೆ. ಸಂಪೂರ್ಣ ತನಿಖೆ ಮಾಡದೆ ಕಾರಣ ಹೇಳಲು ಸಾಧ್ಯವಿಲ್ಲ.

ಅವನ ಉದ್ದೇಶ ಅಯ್ನಾಝ್ ಕೊಲೆ ಮಾಡುವುದಾಗಿತ್ತು. ತಪ್ಪಿಸಿಕೊಳ್ಳಲು ಎಲ್ಲರನ್ನೂ ಕೊಲೆ ಮಾಡಿದ್ದಾನೆ. ಕೊಲೆ ಸಾಕ್ಷಿ ನಾಶ ಮಾಡಲು ಮೂವರ ಕೊಲೆ ಮಾಡಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿ ಪ್ರವೀಣ್ ಚೌಗುಲೆಗೆ ಮದುವೆಯಾಗಿತ್ತು ತಾಂತ್ರಿಕ ಸಾಕ್ಷಿಗಳ ಸಂಗ್ರಹ ಮಾಡಿ ಬಂಧಿಸಿದ್ದೇವೆ. ತನಿಖೆಯಿಂದ ಸಂಪೂರ್ಣ ಮಾಹಿತಿ ಸಿಗಲಿದೆ ಎಂದರು.

- Advertisement -

Related news

error: Content is protected !!