- Advertisement -
- Advertisement -
25 ಲಕ್ಷ ರೂ.ಗೆ 2 ಕೆಜಿ ಚಿನ್ನ ಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬನಿಗೆ ವಂಚಿಸಿದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವ್ ನಲ್ಲಿ ನಡೆದಿದೆ.
ಬಂಧಿತ ಆರೋಪಿಗಳನ್ನು ಕರಣ್ ಮತ್ತು ಪ್ರವೀಣ್ ಎಂದು ಗುರುತಿಸಲಾಗಿದೆ.
ಆರೋಪಿಗಳು ಮೊದಲು ಎರಡು ಚಿನ್ನದ ನಾಣ್ಯಗಳನ್ನು ನೀಡಿ ಹಣ ಪಡೆದು, ಬಳಿಕ ನಕಲಿ ಚಿನ್ನವನ್ನು ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಬೆಂಗಳೂರು ಮೂಲದ ಲಕ್ಷ್ಮಣ್ ಚೆನ್ನಬಸಯ್ಯ ಎಂಬವರಿಗೆ ಚಿನ್ನದ ನಾಣ್ಯಗಳನ್ನು ನೀಡುವುದಾಗಿ ನಂಬಿಸಿದ್ದರು. ಮೊದಲಿಗೆ ಚಿನ್ನದ ನಾಣ್ಯ ನೀಡಿ 25 ಲಕ್ಷ ರೂ. ಪಡೆದು ಬಳಿಕ ನಕಲಿ ಚಿನ್ನದ ನಾಣ್ಯಗಳನ್ನು ನೀಡಿದ್ದರು. ಇದನ್ನು ಪರೀಕ್ಷಿಸಿದಾಗ ನಕಲಿ ಎಂಬುದು ತಿಳಿದು ಬಂದಿತ್ತು.
ಈ ಸಂಬಂಧ ಶಿಗ್ಗಾಂವ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಂಧಿತ ಆರೋಪಿಗಳಿಂದ 12 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ. ಸಂತೋಷ್ ಮತ್ತು ಪ್ರಕಾಶ್ ಎಂಬ ಇಬ್ಬರು ಆರೋಪಿಗಳು ನಾಪತ್ತೆಯಾಗಿದ್ದು, ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ
- Advertisement -