- Advertisement -
- Advertisement -


ಫೈನಾನ್ಸಿನಲ್ಲಿ ಹರಾಜಿಗೆ ಬಂದ ಚಿನ್ನವನ್ನು ಕಡಿಮೆ ಬೆಲೆಯಲ್ಲಿ ಕೊಡಿಸುವುದಾಗಿ ನಂಬಿಸಿ ಹಲವರಿಗೆ ಒಟ್ಟು 75 ಲಕ್ಷರೂ.ಗಳನ್ನು ವಂಚಿಸಿದ ಘಟನೆಯೊಂದು ಬ್ರಹ್ಮಾವರದಲ್ಲಿ ನಡೆದಿದೆ.
ಸುವಾಸಿನಿ ಹಾಗೂ ವಾದಿರಾಜ ಎಂಬವರು ನಡೂರಿನ ನಿತ್ಯಾನಂದ ಎಂಬವರಿಗೆ 35 ಲಕ್ಷ ರೂ.ಸೇರಿದಂತೆ ಹಲವರಿಗೆ ಒಟ್ಟು 75 ಲಕ್ಷ ರೂ. ವಂಚಿಸಿದ ಆರೋಪಿಗಳು.
ಮಣಿಪಾಲದ ಖಾಸಗಿ ಫೈನಾನ್ಸ್ ನಿಂದ ಹರಾಜಿನ ಮೂಲಕ ಪಡೆದ ಚಿನ್ನವನ್ನು ಕಡಿಮೆ ಬೆಲೆಗೆ ನೀಡುವುದಾಗಿ ಇವರು ನಿತ್ಯಾನಂದ (64) ಹಾಗೂ ಇತರರನ್ನು ನಂಬಿಸಿ 2023ರ ಡಿ.11 ರಿಂದ 2024ರ ಜು.16ರವರೆಗೆ ಈ ಹಣವನ್ನು ಪಡೆದಿದ್ದರು ಎನ್ನಲಾಗಿದೆ.
ಆದರೆ ಇದುವರೆಗೂ ಅವರು ಹೇಳಿದ ಚಿನ್ನವನ್ನು ನೀಡದೇ, ಹೂಡಿಕೆ ಮಾಡಿದ ಹಣವನ್ನು ಹಿಂದಿರುಗಿಸದೇ ಮೋಸ ಮಾಡಿರುವುದಾಗಿಯೂ, ಹಣವನ್ನು ವಾಪಾಸು ಕೇಳಿದ್ದಕ್ಕೆ ಆರೋಪಿಗಳು ಬೆದರಿಕೆ ಹಾಕಿರುವುದಾಗಿ ಬ್ರಹ್ಮಾವರ ಠಾಣೆಯಲ್ಲಿ ದಾಖಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.
- Advertisement -