Tuesday, July 1, 2025
spot_imgspot_img
spot_imgspot_img

ಕಲ್ಲಂಗಡಿ ಹಣ್ಣಿನಲ್ಲಿ ಕೃತಕ ಕೆಂಪು ಬಣ್ಣ ಪತ್ತೆ

- Advertisement -
- Advertisement -

ಕುಣಿಗಲ್: ಆಹಾರ ಸುರಕ್ಷತೆಯ ಬಗ್ಗೆ ರಾಜ್ಯ ಸರ್ಕಾರ ಸಾಕಷ್ಟು ಜಾಗೃತಿ ಮೂಡಿಸುತ್ತಿರುವ ಸಂದರ್ಭದಲ್ಲಿ ಪಟ್ಟಣದಲ್ಲಿ ಮಾರಾಟವಾಗಿರುವ ಕಲ್ಲಂಗಡಿ ಹಣ್ಣಿನಲ್ಲಿ ಅಧಿಕ ಪ್ರಮಾಣದ ಕೆಂಪು ಬಣ್ಣ ಕಾಣಿಸಿಕೊಂಡಿದ್ದು ಸ್ಥಳೀಯ ನಿವಾಸಿ ಶಿವರಾಂ ಎಂಬುವರು ನೀಡಿದ ದೂರಿನ ಮೇಲೆ ಸ್ಥಳಕ್ಕೆ ಪುರಸಭಾ ಅಧಿಕಾರಿ ಹಾಗೂ ತಾಲೂಕು ವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಅಂಗಡಿಯನ್ನು ತಾತ್ಕಾಲಿಕವಾಗಿ ಬಂದ್‌ ಮಾಡಿದ್ದಾರೆ.

ಶಿವರಾಂ ಅವರು ಇಲ್ಲಿನ ಮಹಾತ್ಮ ಗಾಂಧಿ ಕಾಲೇಜು ಬಳಿ ತಮಿಳುನಾಡು ಮೂಲದ ವ್ಯಕ್ತಿ ಮಾರುತ್ತಿದ್ದ ಕಲ್ಲಂಗಡಿ ಹಣ್ಣನ್ನು ಖರೀದಿ ಮಾಡಿದ್ದರು. ಮನೆಯಲ್ಲಿ ಹಣ್ಣನ್ನು ಕತ್ತರಿಸುವ ಸಂದರ್ಭದಲ್ಲಿ ತಮ್ಮಲ್ಲಿದ್ದ ಬಿಳಿಯ ಟಿಶ್ಯೂ ಪೇಪರನ್ನು ಹಣ್ಣಿನ ಮೇಲೆ ಇರಿಸಲಾಗಿದೆ. ಬಿಳಿಯ ಟಿಶ್ಯೂ ಪೇಪರ್ ಕೆಂಪು ಬಣ್ಣಕ್ಕೆ ತಿರುಗಿದೆ. ಇದರಿಂದ ಅನುಮಾನಗೊಂಡು ಪುರಸಭಾ ಅಧಿಕಾರಿಗಳಿಗೆ ದೂರು ನೀಡಿದ್ದರು.

ಪುರಸಭೆ ಆರೋಗ್ಯ ವಿಭಾಗದ ಅಧಿಕಾರಿಗಳಾದ ಶ್ರೀಕಾಂತ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಲಾಗಿ ಕಲ್ಲಂಗಡಿ ಹಣ್ಣಿನಲ್ಲಿ ಕೆಂಪು ಬಣ್ಣ ಅತಿ ಹೆಚ್ಚಾಗಿ ಕಾಣುವುದರ ಜೊತೆಗೆ ಟಿಶ್ಯೂ ಪೇಪರ್ ಗೆ ಅಂಟಿದೆ. ಇದರಿಂದ ಕೂಡಲೇ ಅಂಗಡಿಯಲ್ಲಿರುವ ಕಲ್ಲಂಗಡಿ ಹಣ್ಣುಗಳನ್ನು ಮಾರಾಟ ಮಾಡದಂತೆ ಎಚ್ಚರಿಕೆ ನೀಡಿ ಮೇಲಾಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದು ಹೆಚ್ಚಿನ ತನಿಖೆಗೆ ತುಮಕೂರು ಆಹಾರ ಸುರಕ್ಷತಾ ಅಧಿಕಾರಿಗಳನ್ನು ಕರೆಯಿಸಿ ಮುಂದಿನ ಕ್ರಮ ಜರುಗಿಸುವುದಾಗಿ ತಿಳಿಸಿದರು. ಸುದ್ದಿ ತಿಳಿದು ಸ್ಥಳಕ್ಕೆ ಟಿಎಚ್‌ಒ ಮರಿಯಪ್ಪ ಸಹ ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.

- Advertisement -

Related news

error: Content is protected !!