Saturday, June 28, 2025
spot_imgspot_img
spot_imgspot_img

ಕಡಬ : ಜೀವನದಲ್ಲಿ ಜಿಗುಪ್ಸೆಗೊಂಡು ಯುವಕ ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -
This image has an empty alt attribute; its file name is VC_PUC_-1-819x1024.jpg

ಕಡಬ : ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೋರ್ವನು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬದಲ್ಲಿ ನಡೆದಿದೆ.

ಮೃತ ಯುವಕನನ್ನು ಕಡಬ ಬೆಳಂದೂರಿನ ಪಟ್ಟೆ ಮನೆ ನಿವಾಸಿ ರಾಜೇಶ್ ಕುಮಾರ್ (37) ಎಂದು ಗುರುತಿಸಲಾಗಿದೆ.

ನಿನ್ನೆಯಷ್ಟೇ ರಾಜೇಶ್ ಕುದ್ಮಾರಿನಲ್ಲಿರುವ ಸಹೋದರಿಯ ಮನೆಗೆ ತೆರಳಿದ್ದು, ಸಂಜೆ ವೇಳೆಗೆ ಮನೆಗೆ ವಾಪಾಸ್ಸಾಗಿದ್ದರು. ಇಂದು ಬೆಳಿಗ್ಗೆ ಚಿಕ್ಕಪ್ಪನ ಮಗ ರಾಜೇಶ್ ಗೆ ಕರೆ ಮಾಡಿದ್ದು, ರಾಜೇಶ್ ಮನೆಯ ಕೊಟ್ಟಿಗೆಯ ಅಡ್ಡಕ್ಕೆ ನೈಲಾನ್‌ ಹಗ್ಗ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಬೆಳಕಿಗೆ ಬಂದಿದೆ. ಪ್ಲಂಬಿಂಗ್ ಕೆಲಸ ಮಾಡಿಕೊಂಡಿದ್ದ ರಾಜೇಶ್ ದ್ವಿಚಕ್ರ ವಾಹನಕ್ಕೆ ಮಾಡಿದ ಸಾಲವನ್ನು ಮರುಪಾವತಿ ಮಾಡಲಾಗದೇ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ರಾಜೇಶ್ ಮನೆಯಲ್ಲಿ ಒಬ್ಬರೇ ವಾಸವಿದ್ದರು ಎಂದು ತಿಳಿದುಬಂದಿದೆ.
ಈ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!