- Advertisement -
- Advertisement -
ಗದಗ: ನವಜಾತ ಶಿಶುವನ್ನು ಕೊಂದು ಎಸೆದು ಹೋಗಿರುವ ಅಮಾನುಷ ಕೃತ್ಯ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದಲ್ಲಿ ನಡೆದಿದೆ.
ಉಣಚಗೇರಿ ಗ್ರಾಮದ ಹೊರವಲಯದಲ್ಲಿ ಹಸುಗೂಸಿನ ಮೃತದೇಹ ಪತ್ತೆಯಾಗಿದ್ದು, ಸ್ಥಳದಲ್ಲಿ ಬ್ಲೇಡ್, ತುಕ್ಕು ಹಿಡಿದ ಕತ್ತಿ ಸೇರಿ ಹಲವು ವಸ್ತುಗಳ ಕಂಡುಬಂದಿದೆ. ಇಂತಹ ಕೃತ್ಯವೆಸಗಿರುವ ಕಿರಾತಕರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಗಜೇಂದ್ರಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅನುಮಾನಾಸ್ಪದ ಸಾವು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
- Advertisement -