ಬೆಳ್ತಂಗಡಿ: ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಇಸ್ಪೀಟು ಎಲೆಗಳಿಂದ ಅಂದರ್-ಬಹಾರ್ ಎಂಬ ಅದೃಷ್ಟದ ಆಟವನ್ನು ಆಡುತ್ತಿದ್ದ ಅಡ್ಡಕ್ಕೆ ಪೊಲೀಸರು ದಾಳಿ ನಡೆಸಿ 37 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಬೆಳ್ತಂಗಡಿ ತಾಲೂಕು ಮಾಲಾಡಿ ಗ್ರಾಮದ, ಮಡಂತ್ಯಾರಿನಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕು ಮಾಲಾಡಿ ಗ್ರಾಮದ, ಮಡಂತ್ಯಾರು ಪೇಟೆಯ ಬಳಿಯಿರುವ ಅಲ್ಬರ್ಟ್ ಡಿ ಸೋಜಾ ಎಂಬವರಿಗೆ ಸೇರಿದ ಕಟ್ಟಡದಲ್ಲಿರುವ ಎಂ.ಆರ್ ರೀಕ್ರಿಯೇಷನ್ ಕ್ಲಬ್ ನ ಹಿಂಬಾಗದ ಶೆಡ್ ನ ಒಳಗೆ ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಇಸ್ಪೀಟು ಎಲೆಗಳಿಂದ ಅಂದರ್-ಬಹಾರ್ ಎಂಬ ಅದೃಷ್ಟದ ಆಟವನ್ನು ಆಡುತ್ತಿದ್ದಾಗ, ಪುಂಜಾಲಕಟ್ಟೆ ಪೊಲೀಸ್ ಉಪ ನಿರೀಕ್ಷಕರು ಹಾಗು ಸಿಬ್ಬಂದಿಗಳು ಸ್ಥಳಕ್ಕೆ ದಾಳಿ ನಡೆಸಿದ್ದು, ಈ ವೇಳೆ ಒಬ್ಬ ವ್ಯಕ್ತಿಯು ಪರಾರಿಯಾಗಿದ್ದು, ಉಳಿದ 37 ಮಂದಿ ಆರೋಪಿಗಳನ್ನು ಮತ್ತು ಸ್ಥಳದಲ್ಲಿ ಇದ್ದ ಆಟಕ್ಕೆ ಉಪಯೋಗಿಸಿದ ಇಸ್ಪಿಟ್ ಎಲೆಗಳು, ನಗದು ರೂ 54510/- , ಕೃತ್ಯಕ್ಕೆ ಉಪಯೋಗಿಸಿದ ಪಿಠೋಪಕರಣಗಳು, 04 ಸಂಖ್ಯೆಯ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದು, ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ: 91/2023 ಕಲಂ: ಕಲಂ: 79, 80 ಕರ್ನಾಟಕ ಪೊಲೀಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.