- Advertisement -
- Advertisement -



ಸುಳ್ಯ : ಗಾಂಜಾ ಸಾಗಾಟದ ವಿಚಾರಣೆ ನ್ಯಾಯಾಲಯದಲ್ಲಿ ನಡೆದು ಆರೋಪ ಸಾಬೀತಾಗಿದ್ದು ಪ್ರಕರಣದಲ್ಲಿ ಭಾಗಿಯಾದ ಇಬ್ಬರಿಗೆ ಸುಳ್ಯ ನ್ಯಾಯಾಲಯ ಶಿಕ್ಷೆ ವಿಧಿಸಿರುವುದಾಗಿ ವರದಿಯಾಗಿದೆ.
2018ರ ಮಾರ್ಚ್ 28ರಂದು ಸುಳ್ಯ ಗಾಂಧಿನಗರ ಶಾಲಾ ಕ್ರಾಸ್ ಬಳಿ ಮೋಟಾರು ಸೈಕಲ್ನಲ್ಲಿ ಗಾಂಜಾ ಸಾಗಿಸುತ್ತಿದ್ದುದನ್ನು ಪೊಲೀಸರು ಪತ್ತೆ ಹಚ್ಚಿ ಪಿ.ಎಂ. ಮೊಯಿದ್ದೀನ್ ಮತ್ತು ಮುರಳಿ ಸಿ. ಅವರನ್ನು ಬಂಧಿಸಿದ್ದರು.
ಈ ಪ್ರಕರಣವನ್ನು ವಿಚಾರಣೆ ನಡೆಸಿದ ಸುಳ್ಯ ನ್ಯಾಯಾಲಯವು ಇಬ್ಬರೂ ಆರೋಪಿಗಳು ಮಾಡಿರುವ ಅಪರಾಧ ಸಾಬೀತಾಗಿದ್ದು ಇಬ್ಬರನ್ನೂ ದೋಷಿಯೆಂದು ಘೋಷಿಸಿ ಜು.11 ರಂದು ಇಬ್ಬರೂ ಅಪರಾಧಿಗಳಿಗೆ ಎನ್.ಡಿ.ಪಿ.ಎಸ್. ಕಾಯ್ದೆಯ ಕಲಂ. 8 ( C) ಮತ್ತು 20( B) (ii) ( A) ರಡಿಯಲ್ಲಿ ತಲಾ ₹10,000 ದಂಡ ವಿಧಿಸಿರುತ್ತಾರೆ. ದಂಡ ತೆರಲು ತಪ್ಪಿದ್ದಲ್ಲಿ 4 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ.ಬಿ ಮೋಹನ್ ಬಾಬುರವರು ಆದೇಶ ಮಾಡಿರುತ್ತಾರೆ.
- Advertisement -