Sunday, June 29, 2025
spot_imgspot_img
spot_imgspot_img

ವಿಟ್ಲ: ಗ್ಯಾಸ್ ಸಿಲಿಂಡರ್‌ ಹಾಕಿಲ್ಲ ಎಂಬ ಕಾರಣಕ್ಕೆ ಗ್ಯಾಸ್ ಏಜೇನ್ಸಿ ಸಿಬ್ಬಂದಿ ಮೇಲೆ ಅನ್ಯಕೋಮಿನ ತಂಡದಿಂದ ಹಲ್ಲೆ

- Advertisement -
- Advertisement -

ವಿಟ್ಲ: ಗ್ಯಾಸ್ ಹಾಕಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಗ್ಯಾಸ್ ಏಜೆನ್ಸಿಯಲ್ಲಿ ಕೆಲಸ ನಿರ್ವಹಿಸುವ ವ್ಯಕ್ತಿಯೋರ್ವರಿಗೆ ಅನ್ಯಕೋಮಿನ ವ್ಯಕ್ತಿ ಸಮದ್‌ ತಂಡದೊಂದಿಗೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ವಿಟ್ಲ ಮೇಗಿನಪೇಟೆಯಲ್ಲಿ ಸಾಯಿ ಇಂಡಿಯನ್ ಗ್ಯಾಸ್ ಏಜೆನ್ಸಿ ಸಿಬ್ಬಂದಿ ಸದಾನಂದ ಎಂಬವರು ಕಮರ್ಷಿಯಲ್ ಗ್ಯಾಸ್ ಅನ್ನು ಮೇಗಿನಪೇಟೆಯಲ್ಲಿರುವ ಐಡಿಯಲ್‌ ಚಿಕನ್‌ ಸೆಂಟರ್‌ಗೆ ಕೊಂಡೊಯ್ಯುತ್ತಿದ್ದ ವೇಳೆ ಚಿಕನ್‌ ಸೆಂಟರ್‌ ಮಾಲಕ ಸಮದ್‌ ಮೊನ್ನೆ ಯಾಕೆ ಗ್ಯಾಸ್ ಹಾಕಿಲ್ಲವೆಂದು ಗಲಾಟೆ ನಡೆಸಿದ್ದಾನೆ.

ನಿನ್ನೆ ಮೊನ್ನೆಯೆಲ್ಲಾ ರಜೆ ಇತ್ತು ಹಾಗಾಗಿ ಗ್ಯಾಸ್ ಹಾಕಿಲ್ಲವೆಂದು ಗ್ಯಾಸ್ ಏಜೆನ್ಸಿ ಸಿಬ್ಬಂದಿ ಹೇಳಿದ್ದಾರೆ. ಇಷ್ಟಕ್ಕೆ ಕೋಪಗೊಂಡ ಆತ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದು, ಆತನ ಜೊತೆಗಿದ್ದ ಚಿಕನ್‌ ಸೆಂಟರ್‌ ಸಿಬ್ಬಂದಿಗಳು ಹಲ್ಲೆ ನಡೆಸಿರುವುದಾಗಿ ತಿಳಿಸಿದ್ದಾರೆ. ಗ್ಯಾಸ್‌ ಡೆಲಿವರಿ ವಿಚಾರವಾಗಿ ಸಮದ್‌ ಇದಕ್ಕಿಂತ ಮೊದಲು ಫೋನ್‌ ಮಾಡಿ ಧಮ್ಕಿ ಹಾಕಿದ್ದರು ಎನ್ನಲಾಗಿದೆ. ಹಲ್ಲೆಗೊಳಗಾದ ವ್ಯಕ್ತಿ ವಿಟ್ಲ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆಂದು ತಿಳಿದು ಬಂದಿದೆ.

- Advertisement -

Related news

error: Content is protected !!