- Advertisement -
- Advertisement -
ಬೆಂಗಳೂರು: ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಅತಿಥಿ ಉಪನ್ಯಾಸಕರ ಸೇವೆಯನ್ನು ಒಂದು ವರ್ಷದ ಮಟ್ಟಿಗೆ ಮುಂದುವರಿಸಿರುವುದಾಗಿ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ ಈ ನಿರ್ಧಾರದಿಂದ ಕೊರೋನಾ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟದಿಂದ ಕಂಗೆಟ್ಟಿರುವ ಅತಿಥಿ ಉಪನ್ಯಾಸಕರು ನಿರಾಳರಾಗಿದ್ದಾರೆ. ವಿಶ್ವವಿದ್ಯಾಲಯಗಳಲ್ಲಿ 2019-20ನೇ ಸಾಲಿನಲ್ಲಿ ಕಾರ್ಯನಿರ್ವಹಿಸಿರುವ ಪ್ರತಿಯೊಬ್ಬ ಅತಿಥಿ ಉಪನ್ಯಾಸಕರ ಸೇವೆಯ ಅವಧಿಯನ್ನು ಮುಂದುವರಿಸಲಾಗಿದೆ.
ಕೋವಿಡ್-19 ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರ ಸೇವೆ ಅಗತ್ಯ. ಅದೇ ಕಾರಣದಿಂದಾಗಿ ಅವರ ಸೇವೆಯನ್ನು ಇನ್ನು ಒಂದು ವರ್ಷದ ಅವಧಿಗೆ ಮುಂದುವರಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾಹಿತಿ ನೀಡಿದ್ದಾರೆ.
- Advertisement -