Sunday, June 29, 2025
spot_imgspot_img
spot_imgspot_img

ರಾಜ್ಯದ 2 ಕಡೆಗಳಲ್ಲಿ ತುಪ್ಪ ಸುರಕ್ಷಿತವಲ್ಲ: ಆಹಾರ ಸುರಕ್ಷತಾ ಇಲಾಖೆ ಟೆಸ್ಟ್ ನಲ್ಲಿ ಬಹಿರಂಗ

- Advertisement -
- Advertisement -

ಬೆಂಗಳೂರು: ಆಹಾರ ಸುರಕ್ಷತಾ ಇಲಾಖೆ 40 ಕಡೆ ತುಪ್ಪ ಸಂಗ್ರಹ ಮಾಡಿ ಪರೀಕ್ಷೆಗೆ ಒಳಪಡಿಸಿದ್ದು, ಈ ವೇಳೆ ರಾಜ್ಯದ 2 ಕಡೆ ತುಪ್ಪ ಕಲಬೆರಕೆ ಆಗಿರುವುದು ಬಹಿರಂಗವಾಗಿದೆ.

ಆಹಾರ ಮತ್ತು ಸುರಕ್ಷತಾ ಇಲಾಖೆ ಆಗಸ್ಟ್ ತಿಂಗಳಲ್ಲಿ ತುಪ್ಪವನ್ನು ಪರೀಕ್ಷೆಗೊಳಪಡಿಸಿದೆ. ರಾಜ್ಯಾದ್ಯಂತ 40 ಕಡೆ ಮಾದರಿ ಸಂಗ್ರಹಿಸಿದ ಆಹಾರ ಮತ್ತು ಸುರಕ್ಷತಾ ಇಲಾಖೆ, ಬೆಂಗಳೂರು ಮತ್ತು ಬಾಗಲಕೋಟೆಯಲ್ಲಿ ತುಪ್ಪ ಸುರಕ್ಷಿತವಲ್ಲ ಎಂದು ವರದಿ ನೀಡಿದೆ.

ಎಲ್ಲಿಯ ತುಪ್ಪ ಸೇಫ್ ಅಲ್ಲ ಎಂಬ ವರದಿ ಬಂದಿರುವ ಕಡೆ ತುಪ್ಪ ತಯಾರಿಕಾ ಘಟಕಕ್ಕೆ ಆಹಾರ ಮತ್ತು ಸುರಕ್ಷತಾ ಇಲಾಖೆ ನೋಟಿಸ್ ನೀಡಿದೆ. 30 ದಿನಗಳ ಒಳಗೆ ತುಪ್ಪ ಅಸುರಕ್ಷತೆ ಅಲ್ಲ ಎಂದು ಸಾಬೀತುಪಡಿಸಲು ಆಹಾರ ಮತ್ತು ಸುರಕ್ಷತಾ ಇಲಾಖೆ ಸೂಚನೆ ನೀಡಿದೆ.

ಇದೀಗ ದೇಶಾದ್ಯಂತ ತಿರುಪತಿ ಲಡ್ಡು ವಿವಾದ ಭುಗಿಲೆದ್ದಿರುವ ಬೆನ್ನಲ್ಲೇ ರಾಜ್ಯದಲ್ಲಿ ತುಪ್ಪ ಕಲಬೆರಕೆ ಆಗಿರುವುದು ಬೆಳಕಿಗೆ ಬಂದಿದೆ. ಇನ್ನು ತಿರುಪತಿ ಲಡ್ಡಿಗೆ ಕಳಪೆ ಗುಣಮಟ್ಟದ ತುಪ್ಪ, ಪ್ರಾಣಿಗಳ ಕೊಬ್ಬು ಇರುವ ಬಗ್ಗೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ರಾಜ್ಯದ ನಂದಿನಿ ತುಪ್ಪ ಹೊರತುಪಡಿಸಿ, ಉಳಿದ ತುಪ್ಪಗಳನ್ನು ಟೆಸ್ಟ್ ಮಾಡಲು ಆರೋಗ್ಯ ಸಚಿವರು ಸೂಚಿಸಿದ್ದರು.

- Advertisement -

Related news

error: Content is protected !!