- Advertisement -
- Advertisement -
ಅಂಗನವಾಡಿ ಕೇಂದ್ರದಲ್ಲಿದ್ದ ನೀರಿನ ಸಂಪ್ ಗೆ ಬಿದ್ದು 3 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಚ್.ಡಿ.ಕೋಟೆ: ತಾಲೂಕಿನ ಅಂತರಸಂತೆ ಸಮೀಪದ ಬಂಗ್ಲಿ ಹುಂಡಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಬಾಲಕಿ ಬಂಗ್ಲಿಹುಂಡಿ ಗ್ರಾಮದ ನಿವಾಸಿ ಸ್ವಾಮಿ ಮತ್ತು ಅಂಜು ದಂಪತಿಯ ಪುತ್ರಿ ಸನ್ನಿಧಿ (3) ಎಂದು ಗುರುತಿಸಲಾಗಿದೆ.
ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಗೀತ ಮತ್ತು ಸಹಾಯಕಿಯ ನಿರ್ಲಕ್ಷ್ಯದಿಂದ ಮಗು ಸಂಪ್ ಗೆ ಬಿದ್ದು ಸಾವನಪ್ಪಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಅಂತರಸಂತೆ ಪೊಲೀಸ್ ಠಾಣೆಯಲ್ಲಿ ತಾಲೂಕು ಸಿಡಿಪಿಒ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆ ಗೀತ ವಿರುದ್ಧ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.
- Advertisement -