- Advertisement -
- Advertisement -
ಮೂಡಬಿದಿರೆ: ನ್ಯುಮೋನಿಯಾದಿಂದ ಮಂಗಳೂರು ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ತುರ್ತು ನಿಗಾ ವಿಭಾಗದಲ್ಲಿ ದಾಖಲಾಗಿದ್ದ ಪುಟ್ಟ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ.
ಮರೋಡಿ ಗ್ರಾಮದ ಜಯಾನಂದ – ರಾಜಶ್ರೀ ದಂಪತಿ ಪುತ್ರಿಯಾಗಿರುವ ಆಶಿಜಾ ನ್ಯುಮೋನಿಯಾದಿಂದಾಗಿ ಮೃತಪಟ್ಟ ಬಾಲಕಿ.
ನ್ಯುಮೋನಿಯಾದಿಂದ ಮಂಗಳೂರು ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ತುರ್ತು ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು ಎನ್ನಲಾಗಿದೆ. ಶಿರ್ತಾಡಿ ಮೌಂಟ್ ಕಾರ್ಮೆಲ್ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿನಿ ಆಶಿಜಾ ನಿಧನದ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗೆ ಇಂದು ರಜೆ ನೀಡಲಾಗಿದೆ.
- Advertisement -