Tuesday, April 23, 2024
spot_imgspot_img
spot_imgspot_img

ಒಂಟಿ ವೃದ್ಧೆಯ ಚಿನ್ನಾಭರಣ ಎಗರಿಸಿದ ಆರೋಪಿ ಪೊಲೀಸ್ ವಶಕ್ಕೆ.

- Advertisement -G L Acharya panikkar
- Advertisement -

ಮಂಗಳೂರು: ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧೆಗೆ ಸಹಾಯ ಮಾಡುತ್ತಿದ್ದ ವ್ಯಕ್ತಿಯೇ ಆಕೆಯ ಚಿನ್ನಾಭರಣ ಕಳ್ಳತನ ಮಾಡಿದ್ದು , ಆತನನ್ನು  ಪೊಲೀಸರು ಚಿನ್ನಾಭರಣ ಸಹಿತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಚಿಲಿಂಬಿ ಪಂಚಲಿಂಗೇಶ್ವರ ದೇವಸ್ಥಾನದ ಬಳಿ ಫಿಲೋಮಿನಾ ಸಲ್ದಾನ (72) ಎಂಬ ವೃದ್ಧೆ ಒಬ್ಬಂಟಿಯಾಗಿ ವಾಸಿಸುತ್ತಿದ್ದರು. ಈ ವೃದ್ಧೆಗೆ ಶಕ್ತಿನಗರ ನಿವಾಸಿ ರಿಕ್ಷಾ ಚಾಲಕ ಪ್ರವೀಣ್ (40) ಎಂಬಾತ ಸಹಾಯ ಮಾಡುತ್ತಿದ್ದ. ಆದರೆ ಇದೇ ವ್ಯಕ್ತಿ ದಿ.7/6/2020ರಂದು ಫಿಲೋಮಿನಾ ಸಲ್ದಾನ ಅವರ ಚಿನ್ನಾಭರಣವನ್ನು ಎಗರಿಸಿ ಪರಾರಿಯಾಗಿದ್ದ. ಈ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಫಿಲೋಮಿನಾ ದೂರು ದಾಖಲಿಸಿದ್ದರು.

ಪ್ರಕರಣದ ತನಿಖೆ ಕೈಗೊಂಡಿದ್ದ ಉರ್ವ ಪೊಲೀಸ್ ಠಾಣಾಧಿಕಾರಿ ಹಾಗೂ ಸಿಬ್ಬಂದಿ ಆರೋಪಿಯನ್ನು ಬಂಧಿಸಿ, ಆತನ ಬಳಿಯಿದ್ದ ಹಾಗೂ ನಗರದ ಫಳ್ನೀರ್ ಬಳಿಯ ಬ್ಯಾಂಕ್​ನಲ್ಲಿ ಅಡವಿರಿಸಿದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಚಿನ್ನಾಭರಣಗಳ ಮೌಲ್ಯ 4,32,000 ರೂ. ಎಂದು ಅಂದಾಜಿಸಲಾಗಿದೆ.ಉರ್ವ ಪೊಲೀಸ್ ನಿರೀಕ್ಷಕ ಮಹಮ್ಮದ್ ಶರೀಫ್, ಪಿಎಸ್ಐ ಶ್ರೀಕಲಾ, ಎಎಸ್ಐ ಬಾಲಕೃಷ್ಣ ಹಾಗೂ ಸಿಬ್ಬಂದಿ ಪ್ರಕಾಶ, ಬಸವರಾಜ ಬಿರಾದಾರ ತನಿಖಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು‌.

- Advertisement -

Related news

error: Content is protected !!