Saturday, April 27, 2024
spot_imgspot_img
spot_imgspot_img

ಮಂಗಳೂರು: ಚಿನ್ನ ಕಳ್ಳ ಸಾಗಟ – ಇಬ್ಬರು ಆರೋಪಿಗಳ ಬಂಧನ

- Advertisement -G L Acharya panikkar
- Advertisement -

ಮಂಗಳೂರು: ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಕಾಸರಗೋಡು ನಿವಾಸಿಗಳನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಪೇಸ್ಟ್, ಹಾಗೂ ಪೆನ್ ರೂಪದಲ್ಲಿ ಚಿನ್ನವನ್ನು ಸಾಗಿಸುತ್ತಿದ್ದರನ್ನು ಬಂಧಿಸಲಾಗಿದೆ.

ಅಬ್ದುಲ್ ರಶೀದ್ ಮತ್ತು ಅಬ್ದುಲ್ ನಿಷಾದ್ ಬಂಧಿತ ಆರೋಪಿಗಳಾಗಿದ್ದು, ಇವರಿಂದ 61.2 ಲಕ್ಷ ರೂ. ಮೌಲ್ಯದ 1.267 ಕೆ.ಜಿ. ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಪೇಸ್ಟ್ ಆಕಾರದಲ್ಲಿ ಚಿನ್ನವನ್ನು ಪ್ಯಾಂಟ್ ಒಳಗೆ ಕವರ್ ಮಾಡಿಕೊಂಡು ಅಬ್ದುಲ್ ರಶೀದ್ ಚಿನ್ನ ಸಾಗಾಟಕ್ಕೆ ಯತ್ನಿಸಿದ್ದರೆ, ಇನ್ನೋರ್ವ ಆರೋಪಿ ಅಬ್ದುಲ್ ನಿಷಾದ್ ಪೆನ್ ಮತ್ತು ಲೈಟ್ ಗಳ ಒಳಗೆ ಚಿನ್ನ ಇಟ್ಟು ಸಾಗಿಸಲು ಮುಂದಾಗಿದ್ದ, ಆರೋಪಿಗಳನ್ನು ಅಧಿಕಾರಿಗಳು 14 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!