- Advertisement -
- Advertisement -
ಗೂಡ್ಸ್ ವಾಹನ ಹೊಡೆತಕ್ಕೆ ಕೊತ್ತಂಬರಿ ಸೊಪ್ಪು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ನುಜ್ಜು ಗುಜ್ಜದ್ದು ಅಪಘಾತದಲ್ಲಿ ರೈತ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ಸುವರ್ಣಸೌಧದ ಬಳಿ ಬಸ್ತವಾಡ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತಪಟ್ಟ ರೈತ ಬಸ್ತವಾಡ ಗ್ರಾಮದ ಮಲ್ಲಪ್ಪ ದೊಡ್ಡಕಲ್ಲನ್ನವರ (41) ಎಂದು ಗುರುತಿಸಲಾಗಿದೆ.
ರೈತ ಟ್ರ್ಯಾಕ್ಟರ್ ನಲ್ಲಿ ಕೊತ್ತಂಬರಿ ಸೊಪ್ಪು ಸಾಗಿಸುತ್ತಿದ್ದನು. ಈ ವೇಳೆ ಅಪಘಾತ ನಡೆದಿದೆ. ಬೆಳಗಾವಿ ಮಾರ್ಕೆಟ್ ಗೆ ಕೊತ್ತಂಬರಿ ಸೊಪ್ಪು ತೆಗೆದುಕೊಂಡು ಬೆಳಗಾವಿ ಕಡೆಗೆ ಬರುವಾಗ ಹಿಂಬದಿಯಿಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ. ಅಪಘಾತ ರಭಸಕ್ಕೆ ರೈತನ ಟ್ರ್ಯಾಕ್ಟರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಹಿರೇಬಾಗೇವಾಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- Advertisement -