ಬೆಂಗಳೂರು: ರಾಜ್ಯ ಸರ್ಕಾರ 2021ನೇ ಸಾಲಿನ ಸಾರ್ವತ್ರಿಕ ರಜೆಯ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಅದರಲ್ಲಿ 2021ನೇ ಸಾಲಿನ ಸಾರ್ವತ್ರಿಕ ರಜಾದಿನಗಳ ಪಟ್ಟಿ ಜನವರಿ 14ರ ಮಕರ ಸಂಕ್ರಾಂತಿಯಿಂದ ಆರಂಭವಾಗಿ ನವೆಂಬರ್ 22ರ ಕನಕದಾಸ ಜಯಂತಿಯಂದು ಮುಕ್ತಾಯಗೊಳ್ಳುತ್ತದೆ.
ಆ ಪ್ರಕಾರ ಗಣರಾಜ್ಯೋತ್ಸವ, ಮಹಾಶಿವರಾತ್ರಿ, ಗುಡ್ಫ್ರೈಡೇ, ಯುಗಾದಿ, ಅಂಬೇಡ್ಕರ್ ಜಯಂತಿ, ಕಾರ್ಮಿಕರ ದಿನಾಚರಣೆ, ಬಸವ ಜಯಂತಿ, ಅಕ್ಷಯ ತೃತೀಯ, ರಮ್ ಜಾನ್, ಬಕ್ರೀದ್, ಮೊಹರಂ, ವರಸಿದ್ಧಿ ವಿನಾಯಕ ವ್ರತ, ಗಾಂಧಿ ಜಯಂತಿ, ಮಹಾಲಯ ಅಮಾವಾಸ್ಯೆ, ಆಯುಧಪೂಜೆ, ವಿಜಯದಶಮಿ, ವಾಲ್ಮೀಕಿ ಜಯಂತಿ, ಈದ್ ಮಿಲಾದ್,ಕರ್ನಾಟಕ ರಾಜ್ಯೋತ್ಸವ, ನರಕ ಚತುರ್ದಶಿ, ಬಲಿಪಾಡ್ಯಮಿ, ದೀಪಾವಳಿ ರಜೆಗಳು ಈ ಪಟ್ಟಿಯಲ್ಲಿವೆ.
ಮಹಾವೀರ ಜಯಂತಿ( ಏಪ್ರಿಲ್ 25) ಹಾಗೂ ಸ್ವಾತಂತ್ರ್ಯೋತ್ಸವ (ಆಗಸ್ಟ್ 15) ಎರಡೂ ಭಾನುವಾರದಂದು ಮತ್ತು ಕ್ರಿಸ್ಮಸ್ ರಜಾದಿನವಾದ ನಾಲ್ಕನೇ ಶನಿವಾರದಂದು ಇರುವುದರಿಂದ ಅವುಗಳನ್ನು ಸಾರ್ವತ್ರಿಕ ರಜಾದಿನಗಳ ಪಟ್ಟಿಯಲ್ಲಿ ಸೇರಿಸಿಲ್ಲ ಎಂದು ಕರ್ನಾಟಕ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿದೆ.