Saturday, June 28, 2025
spot_imgspot_img
spot_imgspot_img

ಕಡಬ: ಕಂಠಪೂರ್ತಿ ಕುಡಿದು KSRTC ಬಸ್ ನಲ್ಲಿ ಬಿದ್ದು ಹೊರಳಾಡಿದ ಗ್ರಾಮಕರಣಿಕ

- Advertisement -
- Advertisement -

ಕಡಬ:ಕರ್ತವ್ಯದ ಮಧ್ಯೆಯೇ ಕುಡಿತದ ಮತ್ತಿನಲ್ಲಿ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಬಿದ್ದು ಹೊರಳಾಡುತ್ತಿದ್ದ ಗ್ರಾಮಕರಣಿಕನೋರ್ವನನ್ನು ಬಸ್ಸು ಚಾಲಕ ನೇರವಾಗಿ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಇಳಿಸಿದ ಘಟನೆ ಮಂಗಳವಾರ ಸಂಜೆ ಕಡಬದಲ್ಲಿ ನಡೆದಿದೆ.

ಕಡಬ ತಾಲೂಕಿನ ಗೋಳಿತೊಟ್ಟುವಿನ ಗ್ರಾಮ ಕರಣಿಕ ನಾಗಸುಂದರ ಎಂಬಾತ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್ಸಿನಲ್ಲಿ ಕುಡಿದು ಹೊರಳಾಡುತ್ತಿದ್ದ ಎನ್ನಲಾಗಿದೆ. ಪ್ರಯಾಣಿಕರ ದೂರಿನ ಮೇರೆಗೆ ಬಸ್ಸು ಚಾಲಕ ಠಾಣೆಯ ಮುಂಭಾಗಕ್ಕೆ ಬಂದು ಬಸ್ಸನ್ನು ನಿಲ್ಲಿಸಿದ್ದು, ನಾಗಸುಂದರನನ್ನು ಇಳಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!