- Advertisement -
- Advertisement -
ಅಜ್ಜ ಹೊಸ ಮೊಬೈಲ್ ಕೊಡಿಸಿಲಿಲ್ಲವೆಂದು ಮೊಮ್ಮಗ ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೊಳಾಳ್ ಗ್ರಾಮದಲ್ಲಿ ನಡೆದಿದೆ. ಯಶವಂತ್(20) ಸಾವನ್ನಪ್ಪಿದ ಯುವಕ.
ಅಕ್ಟೋಬರ್ 8ರಂದು ಹಿಂದೂ ಮಹಾಗಣಪತಿ ವಿಸರ್ಜನೆ ವೇಳೆ ಯಶವಂತ್ ಮೊಬೈಲ್ ಕಳೆದುಕೊಂಡಿದ್ದ. ಈ ಹಿನ್ನೆಲೆಯಲ್ಲಿ ಕೈಯಲ್ಲಿ ಮೊಬೈಲ್ ಇಲ್ಲದೇ ಕಂಗಾಲಾಗಿದ್ದ. ಹೊಸ ಮೊಬೈಲ್ ಕೊಡಿಸುವಂತೆ ಅಜ್ಜನ ಬಳಿ ಹಠ ಹಿಡಿದಿದ್ದ. , ಅಜ್ಜ ಈರುಳ್ಳಿ ಬೆಳೆ ಬಂದ ಬಳಿಕ ಮೊಬೈಲ್ ಕೊಡಿಸುವುದಾಗಿ ಹೇಳಿದ್ದರು
ಆದರೆ ಅದಕ್ಕೆ ಒಪ್ಪದ ಯಶವಂತ್ ಅಕ್ಟೋಬರ್ 18ರಂದು ಮನೆಯಲ್ಲಿ ರಾಸಾಯನಿಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಸಾಗಿಸುವ ಮಾರ್ಗಮಧ್ಯೆ ಯಶವಂತ್ ಸಾವನ್ನಪ್ಪಿದ್ದಾನೆ. ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -