- Advertisement -
- Advertisement -
ಬೆಂಗಳೂರುನ(13): ದೀಪಾವಳಿ ಸಂದರ್ಭದಲ್ಲಿ ಕೇವಲ ಹಸಿರು ಪಟಾಕಿಗಳಿಗೆ ಮಾತ್ರ ಅವಕಾಶ ಎಂಬ ರಾಜ್ಯ ಸರ್ಕಾರದ ನಿರ್ಧಾರ ಕುರಿತು ಹೈಕೋರ್ಟ್ ಕೆಲವು ಸ್ಪಷ್ಟೀಕರಣ ಕೋರಿದೆ. ಮುಖ್ಯವಾಗಿ ಹಸಿರು ಪಟಾಕಿ ಎಂದರೆ ಏನು ಎಂಬುದನ್ನು ಸ್ಪಷ್ಟಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ , ಇಂದು ಹೈಕೋರ್ಟ್ ಗೆ ಸಮಗ್ರ ಮಾಹಿತಿ ಸಲ್ಲಿಸಲಿದೆ. ಬಳಿಕ ಹೈಕೋರ್ಟ್ ಮಹತ್ವದ ತೀರ್ಪು ನೀಡುವ ಸಾಧ್ಯತೆಯಿದೆ. ಗುರುವಾರ ನಡೆದ ವಿಚಾರಣೆ ಸಂದರ್ಭದಲ್ಲಿ ಹಸಿರು ಪಟಾಕಿ ಕುರಿತು ಸ್ಪಷ್ಟ ಮಾಹಿತಿ ನೀಡದಿರುವುದಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.
- Advertisement -