- Advertisement -
- Advertisement -
ಬೆಂಗಳೂರು: ರಾಜ್ಯಕ್ಕೆ ಕೇಂದ್ರ ಸರ್ಕಾರ ಭರ್ಜರಿ ಹೊಸ ವರ್ಷದ ಸಿಹಿ ಸುದ್ದಿ ನೀಡಿದ್ದು ರಾಜ್ಯದ ಪಾಲಿನ ಜಿಎಸ್ಟಿ ಪರಿಹಾರದಲ್ಲಿ 7694 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.
ಕೇಂದ್ರ ಹಣಕಾಸು ಸಚಿವಾಲಯ ಜಿಎಸ್ಟಿ ಪರಿಹಾರವನ್ನು ಬಿಡುಗಡೆ ಮಾಡಿದ್ದು ಹೊಸ ವರ್ಷದ ಆರಂಭದಲ್ಲಿ ರಾಜ್ಯಕ್ಕೆ ಸಮಾಧಾನ ತರಲು ಕಾರಣವಾಗಿದೆ. ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ 13 ಸಾವಿರ ಕೋಟಿ ರೂಪಾಯಿಗಳಷ್ಟು ಜಿಎಸ್ಟಿ ಪರಿಹಾರದ ಹಣ ಬರಬೇಕಿದ್ದು. ಅದರಲ್ಲಿ 7694 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ.
- Advertisement -