- Advertisement -
- Advertisement -
ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ 45ನೇ ಜಿಎಸ್ಟಿ ಮಂಡಳಿ ಸಭೆ ನಡೆಯಲಿದೆ. ಈ ಸಭೆಯೂ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆಯಲಿದ್ದು, ಕೊರೊನಾ ಚಿಕಿತ್ಸೆಯಲ್ಲಿ ಬಳಸುವ ಔಷಧ ಮತ್ತು ಉಪಕರಣಗಳಿಗೆ ವಿನಾಯಿತಿ, ಇಂಧನ ಬೆಲೆ ಏರಿಕೆ ಕುರಿತು ಸಭೆಯಲ್ಲಿ ಚರ್ಚಿಸಲಾಗುತ್ತದೆ.
ಇನ್ನು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌದರಿ ಮತ್ತು ಜಿಎಸ್ಟಿ ಕೌನ್ಸಿಲ್ಗೆ ನಾಮನಿರ್ದೇಶಿತ ಗೊಂಡಿರುವ ವಿವಿಧ ರಾಜ್ಯಗಳ ಸಚಿವರು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ರಿಪೋರ್ಟ್ ಮಾಡಲಾಗುತ್ತದೆ.
- Advertisement -