- Advertisement -
- Advertisement -
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಸಿಹಿಸುದ್ದಿ ನೀಡಿದೆ. ಸಕ್ಕರೆ ಕಾರ್ಖಾನೆಗಳಲ್ಲಿ ರೈತರಿಗೆ ನೀಡುವ ಕಬ್ಬಿನ ನ್ಯಾಯೋಚಿತ ಮತ್ತು ಕನಿಷ್ಠ ಬೆಂಬಲ ಬೆಲೆ (ಎಫ್ಆರ್ಪಿ) ಪ್ರತಿ ಕ್ವಿಂಟಾಲ್ಗೆ ₹290 ನಿಗಧಿ ಮಾಡಿ ಆದೇಶಿಸಿದೆ.
ಈ ಹಿಂದೆಯೇ ಎಫ್ಆರ್ಪಿ ಏರಿಕೆಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿತ್ತು. ಅದರಂತೆಯೇ ಈಗ 2020-21ರ ಸಕ್ಕರೆ ಋುತುವಿನಲ್ಲಿ ಕಬ್ಬಿನ ಎಫ್ಆರ್ಪಿ ಏರಿಕೆಯಾಗಿ ಪ್ರತಿ ಕ್ವಿಂಟಾಲ್ಗೆ 290 ರೂಪಾಯಿ ಆಗಿದೆ.
ಕಬ್ಬು ಬೆಳೆಗಾರರು ತಮ್ಮ ಉತ್ಪನ್ನಗಳಿಗೆ ನ್ಯಾಯೋಚಿತ ಮತ್ತು ಕನಿಷ್ಠ ಬೆಲೆ ಒದಗಿಸುವ ನಿಟ್ಟಿನಲ್ಲಿ ಎಫ್ಆರ್ಪಿ ನಿರ್ಣಯಿಸಲಾಗಿದೆ. ಹೀಗೆಂದು ಖುದ್ದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ತಿಳಿಸಿದ್ದಾರೆ.
- Advertisement -