Thursday, March 28, 2024
spot_imgspot_img
spot_imgspot_img

ರೈತರಿಗೆ ಸಿಹಿಸುದ್ದಿ ನೀಡಿದ ಪ್ರಧಾನಿ ಮೋದಿ

- Advertisement -G L Acharya panikkar
- Advertisement -

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಸಿಹಿಸುದ್ದಿ ನೀಡಿದೆ. ಸಕ್ಕರೆ ಕಾರ್ಖಾನೆಗಳಲ್ಲಿ ರೈತರಿಗೆ ನೀಡುವ ಕಬ್ಬಿನ ನ್ಯಾಯೋಚಿತ ಮತ್ತು ಕನಿಷ್ಠ ಬೆಂಬಲ ಬೆಲೆ (ಎಫ್‌ಆರ್‌ಪಿ) ಪ್ರತಿ ಕ್ವಿಂಟಾಲ್​​ಗೆ ₹290 ನಿಗಧಿ ಮಾಡಿ ಆದೇಶಿಸಿದೆ.

ಈ ಹಿಂದೆಯೇ ಎಫ್‌ಆರ್‌ಪಿ ಏರಿಕೆಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿತ್ತು. ಅದರಂತೆಯೇ ಈಗ 2020-21ರ ಸಕ್ಕರೆ ಋುತುವಿನಲ್ಲಿ ಕಬ್ಬಿನ ಎಫ್‌ಆರ್‌ಪಿ ಏರಿಕೆಯಾಗಿ ಪ್ರತಿ ಕ್ವಿಂಟಾಲ್‌ಗೆ 290 ರೂಪಾಯಿ ಆಗಿದೆ.

ಕಬ್ಬು ಬೆಳೆಗಾರರು ತಮ್ಮ ಉತ್ಪನ್ನಗಳಿಗೆ ನ್ಯಾಯೋಚಿತ ಮತ್ತು ಕನಿಷ್ಠ ಬೆಲೆ ಒದಗಿಸುವ ನಿಟ್ಟಿನಲ್ಲಿ ಎಫ್‌ಆರ್‌ಪಿ ನಿರ್ಣಯಿಸಲಾಗಿದೆ. ಹೀಗೆಂದು ಖುದ್ದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್​​ ಮಾಡಿ ತಿಳಿಸಿದ್ದಾರೆ.

- Advertisement -

Related news

error: Content is protected !!