Saturday, July 25, 2026
spot_imgspot_img
spot_imgspot_img

ಗುಜರಾತ್‌ನವರು ತಮ್ಮ ಪ್ರಭಾವ ಬಳಸಿ ಫೈನಲ್ ಪಂದ್ಯವನ್ನು ನಮ್ಮಿಂದ ಕಿತ್ತುಕೊಂಡಿದ್ದಾರೆ – ಡಿಕೆಶಿ ಆರೋಪ

- Advertisement -
- Advertisement -

ಬೆಂಗಳೂರು: ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನಲ್ಲಿ ನಡೆಯಬೇಕಿತ್ತು. ಆದರೆ ಗುಜರಾತ್‌ನವರು ತಮ್ಮ ಪ್ರಭಾವ ಬಳಸಿ ಪಂದ್ಯವನ್ನು ನಮ್ಮಿಂದ ಕಿತ್ತುಕೊಂಡಿದ್ದಾರೆ ಎಂದು ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.

ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನಲ್ಲಿ ನಡೆಯದಿರುವ ಕುರಿತು ಪ್ರತಿಕ್ರಿಯಿಸಿ, ಫೈನಲ್ ಪಂದ್ಯ ಕರ್ನಾಟಕದಲ್ಲಿ ನಡೆಯಬೇಕಿತ್ತು. ಅದಕ್ಕೆ ನಾವು ಅನುಮತಿ ಕೂಡ ನೀಡಿದ್ದೆವು. ಆದರೆ ಗುಜರಾತ್‌ನವರು ತಮ್ಮ ಪ್ರಭಾವ ಬಳಸಿ ಪಂದ್ಯವನ್ನು ನಮ್ಮಿಂದ ಕಿತ್ತುಕೊಂಡಿದ್ದಾರೆ. ಮುಂದೆ ಇಂತಹ ಪರಿಸ್ಥಿತಿ ಬರದಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ. ನಮ್ಮ ಸ್ಟೇಡಿಯಂಗೆ ಅನ್ಯಾಯವಾಗಿದೆ. ನಮ್ಮ ಯುವಕರಿಗೂ ಅನ್ಯಾಯವಾಗಿದೆ ಎಂದಿದ್ದಾರೆ.

ಐಪಿಎಲ್ ಸೀಸನ್ 19ರ ಫೈನಲ್‌ನಲ್ಲಿ ಗೆದ್ದು ಎರಡನೇ ಬಾರಿ ಟ್ರೋಫಿ ಮುಡಿಗೇರಿಸಿಕೊಂಡ ಆರ್‌ಸಿಬಿ ತಂಡಕ್ಕೆ ಡಿ.ಕೆ. ಶಿವಕುಮಾರ್ ಅಭಿನಂದಿಸಿದರು. ಆರ್‌ಸಿಬಿ ಕರ್ನಾಟಕದ ಹೆಸರಿನಲ್ಲಿ ಆಡುತ್ತಿರುವ ತಂಡ. ನಮ್ಮ ರಾಜ್ಯದ ಆಟಗಾರರು ಐಪಿಎಲ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಕರ್ನಾಟಕ ಸರ್ಕಾರದ ಪರವಾಗಿ ಹಾಗೂ ರಾಜ್ಯದ ಅಭಿಮಾನಿಗಳ ಪರವಾಗಿ ಆರ್‌ಸಿಬಿ ತಂಡಕ್ಕೆ ಶುಭಾಶಯ ಕೋರುತ್ತೇನೆ. ಕರ್ನಾಟಕ ಹೆಮ್ಮೆಪಡುವಂತಹ ಸಾಧನೆಯನ್ನು ತಂಡ ಮಾಡಿದೆ ಎಂದು ಹೇಳುವ ಮೂಲಕ ಆರ್‌ಸಿಬಿ ಗೆಲುವನ್ನು ಹಾಡಿ ಹೊಗಳಿದ್ದಾರೆ.

- Advertisement -

Related news

error: Content is protected !!