Sunday, May 5, 2024
spot_imgspot_img
spot_imgspot_img

ಕರ್ನಾಟಕ ರಾಜ್ಯ ಕುಸ್ತಿ ಅಸೋಸಿಯೇಷನ್‌ನ ನೂತನ ಅಧ್ಯಕ್ಷರಾಗಿ ಬಿ.ಗುಣರಂಜನ್ ಶೆಟ್ಟಿ ಅಧಿಕೃತವಾಗಿ ಅಧಿಕಾರ ಸ್ವೀಕಾರ

- Advertisement -G L Acharya panikkar
- Advertisement -
vtv vitla

ಕರ್ನಾಟಕ ರಾಜ್ಯ ಕುಸ್ತಿ ಅಸೋಸಿಯೇಷನ್‌ನ ನೂತನ ಅಧ್ಯಕ್ಷರಾಗಿ ಬಿ.ಗುಣರಂಜನ್ ಶೆಟ್ಟಿ ಅಧಿಕೃತವಾಗಿ ಅಧಿಕಾರ ಸ್ವೀಕಾರ ಕರ್ನಾಟಕ ರಾಜ್ಯ ಕುಸ್ತಿ ಅಸೋಸಿಯೇಷನ್‌ನ ನೂತನ ಅಧ್ಯಕ್ಷರಾಗಿ ಬಿ.ಗುಣರಂಜನ್ ಶೆಟ್ಟಿ ಆಯ್ಕೆ ಅಧೀಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇವರೊಂದಿಗೆ ಕಾರ್ಯದರ್ಶಿಯಾಗಿ ಶ್ರೀನಿವಾಸ ಜೆ, ಖಜಾಂಚಿಯಾಗಿ ಶ್ರೀನಿವಾಸ ಅಂಗಾರಕೋಡಿ ಅವರು ಸಹ ಅಧಿಕಾರ ಸ್ವೀಕರಿಸಿದರು.

ಭಾರತೀಯ ಕುಸ್ತಿ ಫೆಡರೇಷನ್‌ನ ಅಧ್ಯಕ್ಷ ಹಾಗೂ ಉತ್ತರಪ್ರದೇಶದ ಕೇಶರ್‍ ಗಂಜ್‌ನ ಲೋಕಸಭಾ ಸದಸ್ಯ ಬ್ರಿಜ್ ಭೂಷಣ್ ಶರಣ್ ಸಿಂಗ್ ಅಧಿಕಾರ ಹಸ್ತಾಂತರ ಮಾಡಿದರು.

ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಪರಿಸರವಾದಿ ಗುಣರಂಜನ್ ಶೆಟ್ಟಿ ಅವರು ಜಯಕರ್ನಾಟಕ ಜನಪರ ವೇದಿಕೆ, ಐಕೇರ್ ಬ್ರಿ ಗೇಡ್ ಮತ್ತು ಮಹಾಲಿಂಗೇಶ್ವರ ಸೇವಾ ಟ್ರಸ್ಟ್ ಸ್ಥಾಪಕಾಧ್ಯ ಕ್ಷರಾಗಿದ್ದಾರೆ.

ಪುತ್ತೂರಿನ ಚಿಕ್ಕಮುಡ್ನೂರು ಗ್ರಾಮದ ಉರಮಾಲು ಗುತ್ತು ನಿವಾಸಿಯಾಗಿದ್ದು ಬೆಳ್ಳಿಪ್ಪಾಡಿ ಮನೆತನದವರಾಗಿದ್ದಾರೆ. ಖ್ಯಾತ ಚಲನಚಿತ್ರ ನಟಿ ಅನುಷ್ಕಾ ಶೆಟ್ಟಿ ಯವರ ಸಹೋದರನಾಗಿರುವ ಗುಣರಂಜನ್ ಶೆಟ್ಟಿಯವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಅಭಿಮಾನಿಗಳಿಗೆ ಖುಷಿ ತಂದಿದೆ.

- Advertisement -

Related news

error: Content is protected !!