Friday, April 26, 2024
spot_imgspot_img
spot_imgspot_img

ಗುರುಕಂಬಳ ಅಂಗನವಾಡಿ ನೂತನ ಕಟ್ಟಡ ಶಾಸಕ ಡಾ.ಭರತ್ ಶೆಟ್ಟಿ ಉದ್ಘಾಟನೆ

- Advertisement -G L Acharya panikkar
- Advertisement -

ಮಂಗಳೂರು: ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಅಂಗನವಾಡಿ ಕೇಂದ್ರ ಪ್ರಮುಖವಾದ ಘಟ್ಟ. ಮಕ್ಕಳ ಪ್ರಥಮ ಪಾಠಶಾಲೆ ಅಂಗನವಾಡಿಯಾಗಿರುವುದರಿಂದ ಉತ್ತಮ ಗುಣಮಟ್ಟದ ಶಿಕ್ಷಣಕ್ಕೆ ಇಂತಹ ಅಂಗನವಾಡಿಗಳು ಸಹಕಾರಿಯಾಗಲಿವೆ ಎಂದು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ವೈಭರತ್ ಶೆಟ್ಟಿ ಹೇಳಿದ್ದಾರೆ. ಅವರು ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುರುಕಂಬಳ ಅಂಗನವಾಡಿ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು‌.


ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷೆ ಅಮಿತಾ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಜನಾರ್ಧನ ಗೌಡ, ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಚೇತನ್ ಕುಮಾರ್, ಬಾಲ ವಿಕಾಸ ಸಮಿತಿ ಸದಸ್ಯರು, ಸ್ತ್ರೀ ಶಕ್ತಿ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ವರ್ಗ, ಅಂಗನವಾಡಿ ಕಾರ್ಯಕರ್ತೆಯರು,ಸಹಾಯಕಿಯರು, ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!