- Advertisement -
- Advertisement -




ಗುರುವಾಯನಕೆರೆ: ಎರಡು ಕಾರುಗಳ ನಡುವೆ ಭೀಕರ ಅಪಘಾತವು ಇಂದು ಮುಂಜಾನೆ ಗುರುವಾಯನಕೆರೆ ಶಕ್ತಿನಗರದಲ್ಲಿ ನಡೆದಿದೆ.
ಗುರುವಾಯನಕೆರೆಯಿಂದ ಹೆಬ್ರಿ ಕಡೆಗೆ ಹೋಗುವ ಸ್ಕೋಡಾ ಕಾರು ಮತ್ತು ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಐ20 ಕಾರಿನ ನಡೆವೆ ಅಪಘಾತ ಸಂಭವಿಸಿದೆ.
ಐ 20 ಕಾರು ಚಾಲಕ ರಸ್ತೆಯ ಹೊಂಡ ತಪ್ಪಿಸಲು ಹೋಗಿ ಈ ಘಟನೆ ನಡೆದಿದೆ ಎಂಬುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಎರಡೂ ಕಾರು ಉಲ್ಟಾ ಬಿದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿಲ್ಲ ಎಂಬುವುದು ತಿಳಿದು ಬಂದಿದೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -