- Advertisement -
- Advertisement -
ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಕುಂಡಡ್ಕ ಶ್ರೀ ಬ್ರಹ್ಮ ಮೊಗೇರ್ಕಳ, ಸ್ವಾಮಿ ಕೊರಗಜ್ಜ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ಡಿ.16 ರಂದು ಸಂಜೆ 6.30 ಕ್ಕೆ ಬೆಂಗಳೂರಿನ ನ್ಯಾಯವಾದಿ ಜಯಪ್ರಕಾಶ್ ರೈ ಕನ್ನೆಜಾಲು ಮತ್ತು ಮನೆಯವರ ಸಲುವಾಗಿ ಕೊರಗಜ್ಜ ದೈವದ ’ಹರಕೆ ನೇಮೋತ್ಸವ’ ನಡೆಯಲಿದೆ.
ರಾತ್ರಿ 8 ಗಂಟೆಗೆ ಅನ್ನ ಸಂತರ್ಪಣೆ ಬಳಿಕ ಬದಿಯಡ್ಕ ಕುಂಟಾಲುಮೂಲೆ ಚಿರಂಜೀವಿ ಯಕ್ಷಗಾನ ಕಲಾ ಸಂಘದ ವತಿಯಿಂದ ‘ಸತ್ಯೋದ ಅಜ್ಜೆ’ ಯಕ್ಷಗಾನ ಬಯಲಾಟ ನಡೆಯಲಿದೆ.
- Advertisement -