- Advertisement -
- Advertisement -
ವಸತಿ ಗೃಹದಲ್ಲಿ ನೀಡುತ್ತಿದ್ದ ಕಿರುಕುಳದಿಂದ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಅಂಬೇಡ್ಕರ್ ಹಾಸ್ಟೆಲ್ನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿ ಹಿರೇಹುಸೇನಪ್ಪ (18) ಎಂದು ಗುರುತಿಸಲಾಗಿದೆ.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಹಿರೇಹುಸೇನಪ್ಪ ಅಂಬೇಡ್ಕರ್ ವಸತಿ ನಿಲಯದಲ್ಲಿದ್ದುಕೊಂಡು ಓದುತ್ತಿದ್ದ. ಹಿರೇಹುಸೇನಪ್ಪ ವಸತಿ ನಿಲಯದ ಮೂಲಭೂತ ಸೌಕರ್ಯಗಳ ಬಗ್ಗೆ ಪ್ರಶ್ನಿಸಿದ್ದನು. ಅದಕ್ಕೆ ಆತನಿಗೆ ದೈಹಿಕ ಮತ್ತು ಮಾನಸಿಕವಾಗಿ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪ ಬಂದಿದೆ.
ವಸತಿ ನಿಲಯದ ವಾರ್ಡನ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಸೇರಿ ಹಿರೇಹುಸೇನಪ್ಪನ ವಿರುದ್ಧ ಉಳಿದ ವಿದ್ಯಾರ್ಥಿಗಳನ್ನು ಎತ್ತಿಕಟ್ಟಿ ಕಿರುಕುಳ ನೀಡಿ, ಜಾತಿನಿಂದನೆ ಮಾಡುತ್ತಿದ್ದರು. ಇದರಿಂದ ಮನನೊಂದು ವಿದ್ಯಾರ್ಥಿ ವಸತಿ ನಿಲಯದ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
- Advertisement -