Saturday, May 4, 2024
spot_imgspot_img
spot_imgspot_img

ಬಸ್ ನಲ್ಲಿ ಹಿಂದೂ ಯುವತಿಗೆ ಕಿರುಕುಳ : ಸಂತ್ರಸ್ತ ಯುವತಿಯ ಮನೆಗೆ ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ

- Advertisement -G L Acharya panikkar
- Advertisement -
This image has an empty alt attribute; its file name is creative2-1024x1024.jpeg

ಬಂಟ್ವಾಳ: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೋರ್ವಳಿಗೆ ಗುಂಡ್ಯದಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದ್ದು, ಸಂತ್ರಸ್ತ ಯುವತಿಯ ಮನೆಗೆ ಆರ್.ಎಸ್.ಎಸ್.ಪ್ರಮುಖರಾದ ಡಾ| ಪ್ರಭಾಕರ್ ಭಟ್ ಬೇಟಿ ನೀಡಿ ಪ್ರಕರಣವನ್ನು ಧ್ಯೆರ್ಯವಾಗಿ ಎದುರಿಸಿದ ಯುವತಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡ ಅವರು ಕಾನೂನು ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು.

ಯುವತಿಯು ಪ್ರಕರಣವನ್ನು ಧ್ಯೆರ್ಯವಾಗಿ ಎದುರಿಸಿದ್ದಾಳೆ, ನಾನು ಅವರಿಗೂ ಧ್ಯೆರ್ಯ ತುಂಬಿದ್ದೇನೆ, ಜೊತೆಗೆ ಇತರ ಹೆಣ್ಣಮಕ್ಕಳು ಕೂಡ ಇವಳ ಹಾಗೆನೇ ಧ್ಯೆರ್ಯವಂತರಾಗಿ ಎದುರಿಸಬೇಕು ಎಂದು ಹೇಳಿದರು.

ಇಂತಹ ಪ್ರಕರಣಗಳು ನಿತ್ಯನಿರಂತರವಾಗಿ ನಡೆಯುತ್ತಿದೆ, ಸಾಮಾನ್ಯ ಮುಸಲ್ಮಾನರಂತೆ ಕಾಣುತ್ತಾರೆ ಆದರೆ, ಭಯೋತ್ಪಾದಕರ ರೀತಿಯಲ್ಲಿ ಹೆಣ್ಮಕ್ಕಳ ಮೇಲೆ ಅನಾಚಾರ ಮಾಡುವಂತಹ ಘಟನೆಗಳು ನಡೆಯುತ್ತಿದೆ.

ಸರಕಾರ ಹಾಗೂ ಪೋಲಿಸ್ ‌ಇಲಾಖೆ ಸರಿಯಾದ ಕ್ರಮ ಕೈಗೊಳ್ಳಬೇಕಾಗಿದೆ.ಇಲ್ಲದಿದ್ದರೆ ಅರಾಜಕತೆ ನಿರ್ಮಾಣ ಮಾಡುವ ಸಾಧ್ಯತೆಗಳಿವೆ,ಇದು ದ‌.ಕ.ಜಿಲ್ಲೆ. ಎಚ್ಚರಿಕೆಯ ವಿಚಾರವನ್ನು ಪ್ರಸ್ತಾಪ ಮಾಡುತ್ತಿದ್ದೇನೆ. ಸರಕಾರ ಬಂದ ಮೇಲೆ ಬಾರಿ ಪ್ರಮಾಣದಲ್ಲಿ ನಡೆಯುತ್ತಲೇ ಇದೆ. ಮುಂದುವರಿದು ಹುಬ್ಬಳ್ಳಿಯಲ್ಲಿ ಹತ್ಯೆ ನಡೆದಿದೆ, ಇದೀಗ ಮತ್ತೊಂದು ಪ್ರಕರಣ ಅದೇ ಭಾಗದಲ್ಲಿ ನಡೆದಿದೆ. ಹಿಂದೂ ಸಮಾಜದ ಮೇಲೆ ಮತ್ತು ಹೆಣ್ಣ್ಮಕ್ಕಳ ಮೇಲೆ ಅನ್ಯಾಯಗಳು ನಡೆದರೆ ಅದನ್ನು ಬಲವಾಗಿ ವಿರೋಧಿಸುತ್ತೇವೆ ಸರಕಾರ ಎಚ್ಚೆತ್ತು ಸರಿಯಾದ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

- Advertisement -

Related news

error: Content is protected !!