Sunday, June 29, 2025
spot_imgspot_img
spot_imgspot_img

ಪೋಷಕರು ಮಾಡಿದ ಸಾಲಕ್ಕೆ ಮಗನಿಗೆ ಕಿರುಕುಳ; ಬೇಸತ್ತ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

- Advertisement -
- Advertisement -

ಪೋಷಕರು ಮಾಡಿದ ಸಾಲದ ಮರು ಪಾವತಿಗಾಗಿ ಮಗನಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಕಿರುಕುಳದಿಂದ ಬೇಸತ್ತ ಮಗ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಜಯಪುರದ ನಗರದ ಶಾಪೇಟೆಯಲ್ಲಿ ನಡೆದಿದೆ.

ನಗರದ ಶಾಪೇಟೆ ನಿವಾಸಿ ಶಾರುಖ್ ಸೌದಾಗರ್, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ಧಾನೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಇನ್ನು ಶಾರುಖ್ ತಂದೆ ಮೆಹಬೂಬಸಾಬ್ ಸ್ಥಳಿಯ ಮಹಿಳೆ ರುಬೀನಾ ಎಂಬುವವರ ಬಳಿ ಸಾಲ ಮಾಡಿದ್ದರಂತೆ. ಆದರೆ,ತೆಗೆದುಕೊಂಡ ಸಾಲವನ್ನು ಮರು ಪಾವತಿ ಮಾಡಿಲ್ಲ. ಈ ಹಿನ್ನಲೆ ರುಬೀನಾ ಮೆಹಬೂಬಸಾಬ್ ರನ್ನು ಕೇಳುವುದನ್ನು ಬಿಟ್ಟು, ಅವರ ಪುತ್ರ ಶಾರುಖ್​ಗೆ ಪೀಡಿಸುತ್ತಿದ್ದಳಂತೆ. ಇದರಿಂದ ಬೇಸರಗೊಂಡ ಶಾರುಖ್, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾನೆ. ಈ ಕುರಿತು ಎಪಿಎಂಸಿ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿ ದೂರು ದಾಖಲು ಮಾಡಿಕೊಂಡಿದ್ಧಾರೆ. ತನಿಖೆ ಮುಂದುವರೆದಿದ್ದು, ಪೊಲೀಸರ ತನಿಖೆ ಬಳಿಕ ಮತ್ತಷ್ಟು ಸತ್ಯಾಂಶ ಹೊರ ಬರಲಿದೆ.

- Advertisement -

Related news

error: Content is protected !!