Thursday, April 18, 2024
spot_imgspot_img
spot_imgspot_img

ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ವಿಟ್ಲ ಪೊಲೀಸ್ ಠಾಣೆಗೆ ದೂರು

- Advertisement -G L Acharya panikkar
- Advertisement -

ವಿಟ್ಲ(ನ.12): ಮಾಜಿ ಸಚಿವ ಬಿ ರಮಾನಾಥ ರೈ ಅವರ ಮೇಲೆ ಕೊಲೆ ಆರೋಪ ಮಾಡಿದ ಹಾಗೂ ಪ್ರಚೋದನಕಾರಿ ಭಾಷಣ ಮಾಡಿದ ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ ವಿರುದ್ಧ ಕಾಂಗ್ರೆಸ್ ಮುಖಂಡರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿ, ಹರಿಕೃಷ್ಣ ಬಂಟ್ವಾಳ ಅವರನ್ನು ಬಂಧಿಸುವಂತೆ ಆಗ್ರಹಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಎಂ ಎಸ್ ಮಹಮ್ಮದ್ ಅವರು ದೂರು ನೀಡಿದರು. ಬಿಜೆಪಿ ಕುಟುಂಬ ಕಾರ್ಯಕ್ರಮದಲ್ಲಿ ಹರಿಕೃಷ್ಣ ಬಂಟ್ವಾಳ್ ಅವರು ರಮಾನಾಥ ರೈ ಅವರು ಶರತ್ ಮಡಿವಾಳನನ್ನು ಕೊಲೆ ಮಾಡಿದವರು ಎಂದು ಕೊಲೆಗಾರನಂತೆ ಬಿಂಬಿಸಿ ಗಂಭೀರ ಆರೋಪ ಮಾಡಿ ಕೋಮು ಸಂಘರ್ಷ ಉಂಟಾಗುವ ರೀತಿಯಲ್ಲಿ ಭಾಷಣ ಮಾಡಿದ್ದು, ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವನ್ನು ಕೆಲವರು ಹರಿಯಬಿಟ್ಟಿದ್ದರು.

ಸಮಾಜದಲ್ಲಿ ಅಶಾಂತಿ ಸೃಷ್ಟಸಿ ಕೋಮು ಸಂಘರ್ಷ ಉಂಟಾಗುವಂತೆ ಪ್ರಚೋದಕಾರಿ ಭಾಷಣ ಮಾಡಿದ್ದರಿಂದ ಮಾಜಿ ಸಚಿವ ರಮಾನಾಥ ರೈ ಅವರ ಘನತೆಗೆ ಧಕ್ಕೆ ಉಂಟಾಗಿದ್ದು, ಪ್ರಾಣಭಯ ಇದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಸಂದರ್ಭ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು, ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ ಮಾಧವ ಮಾವೆ, ಕೊಳ್ನಾಡು ಗ್ರಾಮ ಪಂಚಾಯಿತಿ ನಿಕಟಪೂರ್ವ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಪ್ರಮುಖರಾದ ರಮಾನಾಥ ವಿಟ್ಲ, ಅಶ್ರಪ್ ವಿಕೆಎಂ, ಜಯಂತಿ ಪೂಜಾರಿ, ಎಲ್ಯಣ್ಣ ಪೂಜಾರಿ, ಸಂದೇಶ ಶೆಟ್ಟಿ ಬಿಕ್ನಾಜೆ, ಮಜೀದ್ ಕನ್ಯಾನ, ರಾಮಚಂದ್ರ ಪ್ರಭು, ಅಬ್ದುಲ್ ರಹಿಮಾನ್ ಕಡಂಬು, ಸಿದ್ದಿಕ್ ಸರಾವು, ಶರೀಫ್ ಕೊಡಂಗೆ, ಅಬೂಬಕ್ಕರ್ ಪರ್ತಿಪ್ಪಾಡಿ, ಸೋಮಶೇಖರ ತಾಳಿತ್ತನೂಜಿ, ಅಶೋಕ್ ಡಿಸೋಜ, ಇಬ್ರಾಹಿಂ ಕಡಂಬು, ಪವಿತ್ರ ಪೂಂಜ, ಪ್ರಕಾಶ್ ರೈ ಎರ್ಮೆನಿಲಯ, ಹೇಮನಾಥ ಆಳ್ವ ಎರ್ಮೆನಿಲಯ ಭಾಗವಹಿಸಿದ್ದರು.

- Advertisement -

Related news

error: Content is protected !!