Sunday, June 29, 2025
spot_imgspot_img
spot_imgspot_img

ಹರೀಶ್ ಪೂಂಜಗೆ ತಾಕತ್ತಿದ್ದರೆ ನ್ಯಾಯಾಲಯದ ಮುಂದೆ ತನ್ನ ದ್ವೇಷ ಭಾಷಣವನ್ನು ಸಮರ್ಥಿಸಿಕೊಳ್ಳಲಿ: ಮುನೀರ್ ಕಾಟಿಪಳ್ಳ

- Advertisement -
- Advertisement -

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಮೈಕ್ ಸಿಕ್ಕಿದಾಗ ದ್ವೇಷ ಭಾಷಣ ಮಾಡಿ ನಂತರ ನ್ಯಾಯಾಲಯದ ಮುಂದೆ ಪ್ರಕರಣ ರದ್ದು ಪಡಿಸುವಂತೆ ವಿನಂತಿಸುತ್ತಾರೆ. ಅವರಿಗೆ ತಾಕತ್ತಿದ್ದರೆ ಇಲ್ಲಿ ಮಾಡಿದ ಭಾಷಣವನ್ನು ನ್ಯಾಯಾಲಯದ ಮುಂದೆಯೂ ಒಪ್ಪಿಕೊಡು ಸಮರ್ಥಿಸಿಕೊಳ್ಳಲಿ. ಮುಸ್ಲಿಮರು ಇಲ್ಲದಿದ್ದರೆ ಬಿಜೆಪಿಯವರಿಗೆ ಪಂಚಾಯತ್ ಸೀಟ್ ಗೆಲ್ಲಲೂ ಅಸಾದ್ಯ ಅದಕ್ಕಾಗಿ ಅವರು ಸದಾ ಮುಸ್ಲಿಮರ ಬಗ್ಗೆಯೇ ಮಾತನಾಡುತ್ತಾರೆ ಎಂದು ಸಿಪಿಐಎಂ ದ.ಕ. ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಅವರು ಹೇಳಿದರು

ಅವರು ಸೋಮವಾರ ತೆಕ್ಕಾರು ಧಾರ್ಮಿಕ ಸಭೆಯಲ್ಲಿ ಭಾರತೀಯ ಪ್ರಜೆಗಳನ್ನು ಕೀಳಾಗಿ ಸಂಬೋದಿಸಿ ಭಾರತೀಯರ ಅವಮಾನಿಸಿದ ಶಾಸಕ ಹರೀಶ್ ಪೂಂಜರನ್ನು ಶಾಸಕತ್ವದಿಂದ ತೆಗೆಯಬೇಕು ಎಂದು ಒತ್ತಾಯಿಸಿ ಬೆಳ್ತಂಗಡಿ ಜಮಿಯತುಲ್ ಫಲಾಹ್ ಸಭಾ ಭವನದಲ್ಲಿ ನಡೆದ ಪ್ರತಿಭಟನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತಾಡುತ್ತಿದ್ದರು. ತೆಕ್ಕಾರು ಧಾರ್ಮಿಕ ಸಭೆಯೊಂದರಲ್ಲಿ ಧಾರ್ಮಿಕ ಭಾಷಣ ಮಾಡಬೇಕಾದ ಶಾಸಕರು ಮುಸ್ಲಿಮರ ಜಮೀನಿನಲ್ಲೇ ನಿಂತು ಮುಸ್ಲಿಮರನ್ನೇ ಕೀಳಾಗಿ ಸಂಬೋದಿಸುತ್ತಾ ಮಾತಾಡಿರುವುದು ಅವರ ವ್ಯಕ್ತಿತ್ವ ಏನೆಂಬುದನ್ನು ತೋರಿಸುತ್ತದೆ ಎಂದರು.

- Advertisement -

Related news

error: Content is protected !!